HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...