HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...