HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...