HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...