HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...