HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...