Homeಕರ್ನಾಟಕಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ ಗೌಡ ಎಂಬವರು ಹೆಣ್ಣೂರು ಪೊಲೀಸ್ ಠಾಣೆಗೆ ಈ ದೂರು ನೀಡಿದ್ದಾರೆ. ದೂರಿನಲ್ಲಿ, ”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.

”ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ತೇಜಸ್ ಗೌಡ  ಎಂಬುವವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಈ ಹಿಂದೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿತ್ತು.

ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು‌ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್‌, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್‌ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವೀಡಿಯೊ ವೈರಲ್ ಆಗಿತ್ತು.

ಎಲ್ಲರ ಎದುರಿಗೆ ಬಹಿರಂಗವಾಗಿ ‘ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ’ ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿತ್ತು.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...