Homeಕರ್ನಾಟಕಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಅಶ್ಲೀಲ ಪದಗಳಿಂದ ನಿಂದನೆ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ ಗೌಡ ಎಂಬವರು ಹೆಣ್ಣೂರು ಪೊಲೀಸ್ ಠಾಣೆಗೆ ಈ ದೂರು ನೀಡಿದ್ದಾರೆ. ದೂರಿನಲ್ಲಿ, ”ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಈ ಪೋಸ್‌ಗೆ ಕೆಟ್ಟದ್ದಾಗಿ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.

”ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ತೇಜಸ್ ಗೌಡ  ಎಂಬುವವರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲಿನ ಗೂಂಡಾ ಕಾಯ್ದೆ ರದ್ದು, ಜೈಲಿನಿಂದ ಬಿಡುಗಡೆ: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತ

ಈ ಹಿಂದೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ವೇಳೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ಈ ಕುರಿತು ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿತ್ತು.

ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು‌ ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್‌, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್‌ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವೀಡಿಯೊ ವೈರಲ್ ಆಗಿತ್ತು.

ಎಲ್ಲರ ಎದುರಿಗೆ ಬಹಿರಂಗವಾಗಿ ‘ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ’ ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿತ್ತು.

”ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...