Homeಕರ್ನಾಟಕಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುವಾಗ ಎಬಿವಿಪಿ ಕಾರ್ಯಕರ್ತರು ಹಸ್ತಕ್ಷೇಪ ಮಾಡಲು ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ಆಗಿದೆ.

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರವರ ಫೋಟೋವನ್ನು ಗಣರಾಜ್ಯೋತ್ಸವ ಆಚರಣೆಯಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ತೆರವುಗೊಳಿಸಿದ ಸಂಬಂಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವಿವಿಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೆಂಗಳೂರು ವಿವಿಯ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಎಬಿವಿಪಿ ಸಂಘಟನೆ ಬೇರೆ ವಿಚಾರದ ಕುರಿತು ಪ್ರತಿಭಟನೆ ನಡೆಸಲು ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಂಬೇಡ್ಕರ್‌ ರವರ ಫೋಟೋ ತೆರವು ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್‌ ಮಾತನಾಡಿ, “ರಾಯಚೂರಿನಲ್ಲಿ ಆದ ಘಟನೆಯನ್ನು ಖಂಡಿಸಿ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟದ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ, ಕೋಮುಗಲಭೆ ಸೃಷ್ಟಿಸಲು ವಿಶ್ವವಿದ್ಯಾನಿಲಯಕ್ಕೆ ಬಂದಿತ್ತು” ಎಂದರು.

“ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಎಬಿವಿಪಿಯವರ ವಿರುದ್ಧ ಪ್ರತಿಭಟಿಸಲಾಗಿದೆ. ಅಂಬೇಡ್ಕರ್‌‌ ಫೋಟೋ ಸಂಬಂಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಎಬಿವಿಪಿಗಳು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಜಾರ್ಜ್‌ ಮಾಡಿ ಅವರನ್ನು ತಡೆದರು. ಇದನ್ನೆಲ್ಲ ಬಗೆಹರಿಸಿ ಎಬಿವಿಪಿಗಳನ್ನು ಹೊರಗೆ ಕಳುಹಿಸಿದ ಮೇಲೆ ಎಬಿವಿಪಿ ಕಾರ್ಯಕರ್ತರು ಜ್ಞಾನಭಾರತಿ ಪೊಲೀಸ್ ಠಾಣೆಯ ಮುಂದೆ ಜಮಾಸಿದ್ದಾರೆ. ಪೊಲೀಸ್ ಇಲಾಖೆಯ ಕರೆಯಂತೆ ಕೆಲವು ವಿದ್ಯಾರ್ಥಿ ಮುಖಂಡರು ಠಾಣೆಗೆ ಭೇಟಿ ನೀಡಿದ್ದರು” ಎಂದು ಹೇಳಿದರು.

ವಿದ್ಯಾರ್ಥಿ ಮುಖಂಡ ಮನೋಜ್‌ ಮಾತನಾಡಿ, “ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಬಂದಿತ್ತು. ಮೂರು ದಿನಗಳಿಂದ ನಡೆಯುತ್ತಿದ್ದ ನಮ್ಮ ಹೋರಾಟವನ್ನು ಹಾಳು ಮಾಡುವುದು ಅವರ ಉದ್ದೇಶವಾಗಿತ್ತು. ಮಾರ್ಕ್ ಕಾರ್ಡ್ ಸಮಸ್ಯೆ, ಹಾಸ್ಟೆಲ್‌ ಸಮಸ್ಯೆ ನೆಪದಲ್ಲಿ ಕ್ಯಾಂಪಸ್‌ಗೆ ಅವರು ಆಗಮಿಸಿದ್ದರು. ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನೀವು ಬರುವ ಅಗತ್ಯವಿಲ್ಲ ಎಂದು ಮೊದಲೇ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಎಬಿವಿಪಿ ಸಂಘಟನೆ ಅದನ್ನು ತಿರಸ್ಕರಿಸಿತ್ತು” ಎಂದು ಮಾಹಿತಿ ನೀಡಿದರು.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...