Homeಕರ್ನಾಟಕಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುವಾಗ ಎಬಿವಿಪಿ ಕಾರ್ಯಕರ್ತರು ಹಸ್ತಕ್ಷೇಪ ಮಾಡಲು ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ಆಗಿದೆ.

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರವರ ಫೋಟೋವನ್ನು ಗಣರಾಜ್ಯೋತ್ಸವ ಆಚರಣೆಯಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ತೆರವುಗೊಳಿಸಿದ ಸಂಬಂಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವಿವಿಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೆಂಗಳೂರು ವಿವಿಯ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಎಬಿವಿಪಿ ಸಂಘಟನೆ ಬೇರೆ ವಿಚಾರದ ಕುರಿತು ಪ್ರತಿಭಟನೆ ನಡೆಸಲು ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಂಬೇಡ್ಕರ್‌ ರವರ ಫೋಟೋ ತೆರವು ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್‌ ಮಾತನಾಡಿ, “ರಾಯಚೂರಿನಲ್ಲಿ ಆದ ಘಟನೆಯನ್ನು ಖಂಡಿಸಿ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟದ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ, ಕೋಮುಗಲಭೆ ಸೃಷ್ಟಿಸಲು ವಿಶ್ವವಿದ್ಯಾನಿಲಯಕ್ಕೆ ಬಂದಿತ್ತು” ಎಂದರು.

“ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಎಬಿವಿಪಿಯವರ ವಿರುದ್ಧ ಪ್ರತಿಭಟಿಸಲಾಗಿದೆ. ಅಂಬೇಡ್ಕರ್‌‌ ಫೋಟೋ ಸಂಬಂಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಎಬಿವಿಪಿಗಳು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಜಾರ್ಜ್‌ ಮಾಡಿ ಅವರನ್ನು ತಡೆದರು. ಇದನ್ನೆಲ್ಲ ಬಗೆಹರಿಸಿ ಎಬಿವಿಪಿಗಳನ್ನು ಹೊರಗೆ ಕಳುಹಿಸಿದ ಮೇಲೆ ಎಬಿವಿಪಿ ಕಾರ್ಯಕರ್ತರು ಜ್ಞಾನಭಾರತಿ ಪೊಲೀಸ್ ಠಾಣೆಯ ಮುಂದೆ ಜಮಾಸಿದ್ದಾರೆ. ಪೊಲೀಸ್ ಇಲಾಖೆಯ ಕರೆಯಂತೆ ಕೆಲವು ವಿದ್ಯಾರ್ಥಿ ಮುಖಂಡರು ಠಾಣೆಗೆ ಭೇಟಿ ನೀಡಿದ್ದರು” ಎಂದು ಹೇಳಿದರು.

ವಿದ್ಯಾರ್ಥಿ ಮುಖಂಡ ಮನೋಜ್‌ ಮಾತನಾಡಿ, “ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಬಂದಿತ್ತು. ಮೂರು ದಿನಗಳಿಂದ ನಡೆಯುತ್ತಿದ್ದ ನಮ್ಮ ಹೋರಾಟವನ್ನು ಹಾಳು ಮಾಡುವುದು ಅವರ ಉದ್ದೇಶವಾಗಿತ್ತು. ಮಾರ್ಕ್ ಕಾರ್ಡ್ ಸಮಸ್ಯೆ, ಹಾಸ್ಟೆಲ್‌ ಸಮಸ್ಯೆ ನೆಪದಲ್ಲಿ ಕ್ಯಾಂಪಸ್‌ಗೆ ಅವರು ಆಗಮಿಸಿದ್ದರು. ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನೀವು ಬರುವ ಅಗತ್ಯವಿಲ್ಲ ಎಂದು ಮೊದಲೇ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಎಬಿವಿಪಿ ಸಂಘಟನೆ ಅದನ್ನು ತಿರಸ್ಕರಿಸಿತ್ತು” ಎಂದು ಮಾಹಿತಿ ನೀಡಿದರು.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...