Homeಕರ್ನಾಟಕಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುವಾಗ ಎಬಿವಿಪಿ ಕಾರ್ಯಕರ್ತರು ಹಸ್ತಕ್ಷೇಪ ಮಾಡಲು ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ಆಗಿದೆ.

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ರವರ ಫೋಟೋವನ್ನು ಗಣರಾಜ್ಯೋತ್ಸವ ಆಚರಣೆಯಂದು ರಾಯಚೂರು ಜಿಲ್ಲಾ ನ್ಯಾಯಾಧೀಶರು ತೆರವುಗೊಳಿಸಿದ ಸಂಬಂಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದ ವೇಳೆ, ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ವಿವಿಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೆಂಗಳೂರು ವಿವಿಯ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ, ಎಬಿವಿಪಿ ಸಂಘಟನೆ ಬೇರೆ ವಿಚಾರದ ಕುರಿತು ಪ್ರತಿಭಟನೆ ನಡೆಸಲು ಬಂದಿದ್ದು, ವಿವಾದಕ್ಕೆ ಕಾರಣವಾಗಿದೆ.

ಅಂಬೇಡ್ಕರ್‌ ರವರ ಫೋಟೋ ತೆರವು ವಿರೋಧಿಸಿ ನಡೆಯುತ್ತಿದ್ದ ಹೋರಾಟಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠೀ ಚಾರ್ಜ್‌ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಸಂಶೋಧನಾ ವಿದ್ಯಾರ್ಥಿ ಚಂದ್ರು ಪೆರಿಯಾರ್‌ ಮಾತನಾಡಿ, “ರಾಯಚೂರಿನಲ್ಲಿ ಆದ ಘಟನೆಯನ್ನು ಖಂಡಿಸಿ, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸ್ನಾತಕೋತ್ತರ ಮತ್ತು ಸಂಶೋಧನಾ ಒಕ್ಕೂಟದ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಬೇಕು ಎಂದು ಬಿಜೆಪಿ ಬೆಂಬಲಿತ ಸಂಘಟನೆಯಾದ ಎಬಿವಿಪಿ, ಕೋಮುಗಲಭೆ ಸೃಷ್ಟಿಸಲು ವಿಶ್ವವಿದ್ಯಾನಿಲಯಕ್ಕೆ ಬಂದಿತ್ತು” ಎಂದರು.

“ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿರುವ ಎಬಿವಿಪಿಯವರ ವಿರುದ್ಧ ಪ್ರತಿಭಟಿಸಲಾಗಿದೆ. ಅಂಬೇಡ್ಕರ್‌‌ ಫೋಟೋ ಸಂಬಂಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಎಬಿವಿಪಿಗಳು ಯತ್ನಿಸಿದ್ದಾರೆ. ಎಚ್ಚೆತ್ತುಕೊಂಡ ಪೊಲೀಸರು ಲಾಠಿ ಜಾರ್ಜ್‌ ಮಾಡಿ ಅವರನ್ನು ತಡೆದರು. ಇದನ್ನೆಲ್ಲ ಬಗೆಹರಿಸಿ ಎಬಿವಿಪಿಗಳನ್ನು ಹೊರಗೆ ಕಳುಹಿಸಿದ ಮೇಲೆ ಎಬಿವಿಪಿ ಕಾರ್ಯಕರ್ತರು ಜ್ಞಾನಭಾರತಿ ಪೊಲೀಸ್ ಠಾಣೆಯ ಮುಂದೆ ಜಮಾಸಿದ್ದಾರೆ. ಪೊಲೀಸ್ ಇಲಾಖೆಯ ಕರೆಯಂತೆ ಕೆಲವು ವಿದ್ಯಾರ್ಥಿ ಮುಖಂಡರು ಠಾಣೆಗೆ ಭೇಟಿ ನೀಡಿದ್ದರು” ಎಂದು ಹೇಳಿದರು.

ವಿದ್ಯಾರ್ಥಿ ಮುಖಂಡ ಮನೋಜ್‌ ಮಾತನಾಡಿ, “ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಬೇಕು ಎಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಎಬಿವಿಪಿ ಸಂಘಟನೆ ಪ್ರತಿಭಟನೆಗೆ ಬಂದಿತ್ತು. ಮೂರು ದಿನಗಳಿಂದ ನಡೆಯುತ್ತಿದ್ದ ನಮ್ಮ ಹೋರಾಟವನ್ನು ಹಾಳು ಮಾಡುವುದು ಅವರ ಉದ್ದೇಶವಾಗಿತ್ತು. ಮಾರ್ಕ್ ಕಾರ್ಡ್ ಸಮಸ್ಯೆ, ಹಾಸ್ಟೆಲ್‌ ಸಮಸ್ಯೆ ನೆಪದಲ್ಲಿ ಕ್ಯಾಂಪಸ್‌ಗೆ ಅವರು ಆಗಮಿಸಿದ್ದರು. ನಮ್ಮ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನೀವು ಬರುವ ಅಗತ್ಯವಿಲ್ಲ ಎಂದು ಮೊದಲೇ ಸ್ಪಷ್ಟವಾಗಿ ಹೇಳಿದ್ದೆವು. ಆದರೆ ಎಬಿವಿಪಿ ಸಂಘಟನೆ ಅದನ್ನು ತಿರಸ್ಕರಿಸಿತ್ತು” ಎಂದು ಮಾಹಿತಿ ನೀಡಿದರು.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...