HomeಮುಖಪುಟABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

2017 ರಿಂದ ತಮ್ಮ ಪಠ್ಯಕ್ರಮದ ಭಾಗವಾಗಿರುವ ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಪುಸ್ತಕವನ್ನು ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ಹಿಂಪಡೆದಿದೆ.

- Advertisement -
- Advertisement -

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ಅರುಂಧತಿ ರಾಯ್ ಬರೆದಿರುವ ಪುಸ್ತಕವನ್ನು ತನ್ನ ಪಠ್ಯಕ್ರಮದಿಂದ ಹಿಂತೆಗೆದುಕೊಳ್ಳಲು ತಮಿಳುನಾಡಿನ ತಿರುನೆಲ್ವೇಲಿ ನಗರದ ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ನಿರ್ಧರಿಸಿದೆ ಎಂದು ವರದಿಯಾಗಿದೆ. ಅರುಂಧತಿ ರಾಯ್ ಅವರ, “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಎಂಬ ಮಾವೋವಾದಿ ಶಿಬಿರಗಳಿಗೆ ಅವರು ನೀಡಿದ್ದ ಭೇಟಿಯನ್ನು ಆಧರಿಸಿದ ಪುಸ್ತಕವು 2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿತ್ತು.

“ಡೀನ್‌ಗಳು ಮತ್ತು ಶೈಕ್ಷಣಿಕ ಅಧ್ಯಯನ ಮಂಡಳಿಯ ಸದಸ್ಯರನ್ನು ಒಳಗೊಂಡ ಸಮಿತಿಯು ದೂರನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ವಿವಾದಾತ್ಮಕ ಪುಸ್ತಕವನ್ನು ಕಲಿಸುವುದು ಸೂಕ್ತವಲ್ಲದ ಕಾರಣ ಪುಸ್ತಕವನ್ನು ಹಿಂಪಡೆಯಲು ನಿರ್ಧರಿಸಿದೆ. ಅದರ ಬದಲಿಗೆ ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ” ಎಂದು ವಿವಿಯ ಉಪಕುಲಪತಿ ಕೆ ಪಿಚುಮಣಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿ ವರದಿ ಮಾಡಿದೆ.ಇದನ್ನೂ ಓದಿ: ಈ ಸಾಂಕ್ರಾಮಿಕ ಹೊಸ ವ್ಯವಸ್ಥೆಗೆ ದಾರಿದೀಪವಾಗಬಲ್ಲದೆ? – ಅರುಂಧತಿ ರಾಯ್ಎಬಿವಿಪಿ ದಕ್ಷಿಣ ತಮಿಳುನಾಡಿನ ಜಂಟಿ ಕಾರ್ಯದರ್ಶಿ ಸಿ ವಿಘ್ನೇಶ್ ಎಂಬವರು, ರಾಷ್ಟ್ರ ವಿರೋಧಿ ಮಾವೋವಾದಿಗಳ ಹತ್ಯೆ ಮತ್ತು ಗಲಭೆಗಳನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ನಿರ್ಧಾರದಲ್ಲಿ ವಿಳಂಬವಾದರೆ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ಮತ್ತು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಎಚ್ಚರಿಕೆ ನೀಡಿದ್ದರು.

ಈ ಪುಸ್ತಕವು ಕಳೆದ ಮೂರು ವರ್ಷಗಳಿಂದ ಪಠ್ಯಕ್ರಮದಲ್ಲಿರುವುದು ಅತ್ಯಂತ ವಿಷಾದನೀಯ ಎಂದು ದೂರಿನಲ್ಲಿ ತಿಳಿಸಿರುವ ಎಬಿವಿಪಿ, “ಈ ಎಲ್ಲಾ ವರ್ಷಗಳಲ್ಲಿ ಮಾವೋವಾದಿಗಳ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಯುವ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ” ಎಂದು ಆರೋಪಿಸಿತ್ತು.

ವಿವಿಯು ಪುಸ್ತಕವನ್ನು ವಾಪಾಸು ಪಡೆದಿರುವು ಎಬಿವಿಪಿಯ ಹೋರಾಟಕ್ಕೆ ದಕ್ಕಿದ ಗೆಲುವು ಎಂದು ತಮಿಳುನಾಡಿನ ಬಿಜೆಪಿ ವಕ್ತಾರ ಎಸ್‌‌.ಜಿ. ಸೂರ್ಯ ಹೇಳಿದ್ದಾರೆ.ಇದನ್ನೂ ಓದಿ:  ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರಆದರೆ ವಿವಿಯ ನಡೆಯನ್ನು ದ್ರಾವಿಡ ಮುನ್ನೇಟ್ರಾ ಕಳಗಮ್ ಸಂಸದೆ ಕನಿಮೋಳಿ ಟೀಕಿಸಿದ್ದು, “ಆಡಳಿತ ಮತ್ತು ರಾಜಕೀಯವು, ಯಾವ ಕಲೆ ಮತ್ತು ಯಾವ ಸಾಹಿತ್ಯವನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕೆಂಬುವುದನ್ನು ನಿರ್ಧರಿಸುವುದು ಸಮಾಜದ ವೈವಿಧ್ಯತೆಯನ್ನು ನಾಶಪಡಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ’: ಪ್ರತಿಭಟನೆಯಲ್ಲಿ ಅರುಂಧತಿ ರಾಯ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...