HomeಮುಖಪುಟABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

2017 ರಿಂದ ತಮ್ಮ ಪಠ್ಯಕ್ರಮದ ಭಾಗವಾಗಿರುವ ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಪುಸ್ತಕವನ್ನು ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ಹಿಂಪಡೆದಿದೆ.

- Advertisement -
- Advertisement -

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ಅರುಂಧತಿ ರಾಯ್ ಬರೆದಿರುವ ಪುಸ್ತಕವನ್ನು ತನ್ನ ಪಠ್ಯಕ್ರಮದಿಂದ ಹಿಂತೆಗೆದುಕೊಳ್ಳಲು ತಮಿಳುನಾಡಿನ ತಿರುನೆಲ್ವೇಲಿ ನಗರದ ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ನಿರ್ಧರಿಸಿದೆ ಎಂದು ವರದಿಯಾಗಿದೆ. ಅರುಂಧತಿ ರಾಯ್ ಅವರ, “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಎಂಬ ಮಾವೋವಾದಿ ಶಿಬಿರಗಳಿಗೆ ಅವರು ನೀಡಿದ್ದ ಭೇಟಿಯನ್ನು ಆಧರಿಸಿದ ಪುಸ್ತಕವು 2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿತ್ತು.

“ಡೀನ್‌ಗಳು ಮತ್ತು ಶೈಕ್ಷಣಿಕ ಅಧ್ಯಯನ ಮಂಡಳಿಯ ಸದಸ್ಯರನ್ನು ಒಳಗೊಂಡ ಸಮಿತಿಯು ದೂರನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ವಿವಾದಾತ್ಮಕ ಪುಸ್ತಕವನ್ನು ಕಲಿಸುವುದು ಸೂಕ್ತವಲ್ಲದ ಕಾರಣ ಪುಸ್ತಕವನ್ನು ಹಿಂಪಡೆಯಲು ನಿರ್ಧರಿಸಿದೆ. ಅದರ ಬದಲಿಗೆ ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ” ಎಂದು ವಿವಿಯ ಉಪಕುಲಪತಿ ಕೆ ಪಿಚುಮಣಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿ ವರದಿ ಮಾಡಿದೆ.ಇದನ್ನೂ ಓದಿ: ಈ ಸಾಂಕ್ರಾಮಿಕ ಹೊಸ ವ್ಯವಸ್ಥೆಗೆ ದಾರಿದೀಪವಾಗಬಲ್ಲದೆ? – ಅರುಂಧತಿ ರಾಯ್ಎಬಿವಿಪಿ ದಕ್ಷಿಣ ತಮಿಳುನಾಡಿನ ಜಂಟಿ ಕಾರ್ಯದರ್ಶಿ ಸಿ ವಿಘ್ನೇಶ್ ಎಂಬವರು, ರಾಷ್ಟ್ರ ವಿರೋಧಿ ಮಾವೋವಾದಿಗಳ ಹತ್ಯೆ ಮತ್ತು ಗಲಭೆಗಳನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ನಿರ್ಧಾರದಲ್ಲಿ ವಿಳಂಬವಾದರೆ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ಮತ್ತು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಎಚ್ಚರಿಕೆ ನೀಡಿದ್ದರು.

ಈ ಪುಸ್ತಕವು ಕಳೆದ ಮೂರು ವರ್ಷಗಳಿಂದ ಪಠ್ಯಕ್ರಮದಲ್ಲಿರುವುದು ಅತ್ಯಂತ ವಿಷಾದನೀಯ ಎಂದು ದೂರಿನಲ್ಲಿ ತಿಳಿಸಿರುವ ಎಬಿವಿಪಿ, “ಈ ಎಲ್ಲಾ ವರ್ಷಗಳಲ್ಲಿ ಮಾವೋವಾದಿಗಳ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಯುವ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ” ಎಂದು ಆರೋಪಿಸಿತ್ತು.

ವಿವಿಯು ಪುಸ್ತಕವನ್ನು ವಾಪಾಸು ಪಡೆದಿರುವು ಎಬಿವಿಪಿಯ ಹೋರಾಟಕ್ಕೆ ದಕ್ಕಿದ ಗೆಲುವು ಎಂದು ತಮಿಳುನಾಡಿನ ಬಿಜೆಪಿ ವಕ್ತಾರ ಎಸ್‌‌.ಜಿ. ಸೂರ್ಯ ಹೇಳಿದ್ದಾರೆ.ಇದನ್ನೂ ಓದಿ:  ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರಆದರೆ ವಿವಿಯ ನಡೆಯನ್ನು ದ್ರಾವಿಡ ಮುನ್ನೇಟ್ರಾ ಕಳಗಮ್ ಸಂಸದೆ ಕನಿಮೋಳಿ ಟೀಕಿಸಿದ್ದು, “ಆಡಳಿತ ಮತ್ತು ರಾಜಕೀಯವು, ಯಾವ ಕಲೆ ಮತ್ತು ಯಾವ ಸಾಹಿತ್ಯವನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕೆಂಬುವುದನ್ನು ನಿರ್ಧರಿಸುವುದು ಸಮಾಜದ ವೈವಿಧ್ಯತೆಯನ್ನು ನಾಶಪಡಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ’: ಪ್ರತಿಭಟನೆಯಲ್ಲಿ ಅರುಂಧತಿ ರಾಯ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...