HomeಮುಖಪುಟABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

ABVP ದೂರು ಹಿನ್ನಲೆ: ಅರುಂಧತಿ ರಾಯ್ ಪುಸ್ತಕ ಹಿಂಪಡೆದ ತಮಿಳುನಾಡು ವಿವಿ!

2017 ರಿಂದ ತಮ್ಮ ಪಠ್ಯಕ್ರಮದ ಭಾಗವಾಗಿರುವ ’ವಾಕಿಂಗ್ ವಿಥ್ ದಿ ಕಾಮ್ರೇಡ್ಸ್’ ಪುಸ್ತಕವನ್ನು ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ಹಿಂಪಡೆದಿದೆ.

- Advertisement -
- Advertisement -

ಎಬಿವಿಪಿ ದೂರಿನ ಹಿನ್ನೆಲೆಯಲ್ಲಿ ಅರುಂಧತಿ ರಾಯ್ ಬರೆದಿರುವ ಪುಸ್ತಕವನ್ನು ತನ್ನ ಪಠ್ಯಕ್ರಮದಿಂದ ಹಿಂತೆಗೆದುಕೊಳ್ಳಲು ತಮಿಳುನಾಡಿನ ತಿರುನೆಲ್ವೇಲಿ ನಗರದ ಮನೋನ್ಮನಿಯಮ್ ಸುಂದರನಾರ್ ವಿಶ್ವವಿದ್ಯಾಲಯ ನಿರ್ಧರಿಸಿದೆ ಎಂದು ವರದಿಯಾಗಿದೆ. ಅರುಂಧತಿ ರಾಯ್ ಅವರ, “ವಾಕಿಂಗ್ ವಿಥ್ ದಿ ಕಾಮ್ರೇಡ್ಸ್” ಎಂಬ ಮಾವೋವಾದಿ ಶಿಬಿರಗಳಿಗೆ ಅವರು ನೀಡಿದ್ದ ಭೇಟಿಯನ್ನು ಆಧರಿಸಿದ ಪುಸ್ತಕವು 2017 ರಿಂದ ವಿಶ್ವವಿದ್ಯಾಲಯದ ಪಠ್ಯಕ್ರಮದ ಭಾಗವಾಗಿತ್ತು.

“ಡೀನ್‌ಗಳು ಮತ್ತು ಶೈಕ್ಷಣಿಕ ಅಧ್ಯಯನ ಮಂಡಳಿಯ ಸದಸ್ಯರನ್ನು ಒಳಗೊಂಡ ಸಮಿತಿಯು ದೂರನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ವಿವಾದಾತ್ಮಕ ಪುಸ್ತಕವನ್ನು ಕಲಿಸುವುದು ಸೂಕ್ತವಲ್ಲದ ಕಾರಣ ಪುಸ್ತಕವನ್ನು ಹಿಂಪಡೆಯಲು ನಿರ್ಧರಿಸಿದೆ. ಅದರ ಬದಲಿಗೆ ಎಂ ಕೃಷ್ಣನ್ ಅವರ ’ಮೈ ನೇಟಿವ್ ಲ್ಯಾಂಡ್: ಎಸ್ಸೇಸ್ ಆನ್ ನೇಚರ್’ ಎಂಬ ಪುಸ್ತಕವನ್ನು ಸೇರಿಸುತ್ತೇವೆ” ಎಂದು ವಿವಿಯ ಉಪಕುಲಪತಿ ಕೆ ಪಿಚುಮಣಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿ ವರದಿ ಮಾಡಿದೆ.ಇದನ್ನೂ ಓದಿ: ಈ ಸಾಂಕ್ರಾಮಿಕ ಹೊಸ ವ್ಯವಸ್ಥೆಗೆ ದಾರಿದೀಪವಾಗಬಲ್ಲದೆ? – ಅರುಂಧತಿ ರಾಯ್ಎಬಿವಿಪಿ ದಕ್ಷಿಣ ತಮಿಳುನಾಡಿನ ಜಂಟಿ ಕಾರ್ಯದರ್ಶಿ ಸಿ ವಿಘ್ನೇಶ್ ಎಂಬವರು, ರಾಷ್ಟ್ರ ವಿರೋಧಿ ಮಾವೋವಾದಿಗಳ ಹತ್ಯೆ ಮತ್ತು ಗಲಭೆಗಳನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ನಿರ್ಧಾರದಲ್ಲಿ ವಿಳಂಬವಾದರೆ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ಮತ್ತು ಕೇಂದ್ರ ಸರ್ಕಾರದ ಗಮನಕ್ಕೆ ತರುವುದಾಗಿ ಅವರು ಎಚ್ಚರಿಕೆ ನೀಡಿದ್ದರು.

ಈ ಪುಸ್ತಕವು ಕಳೆದ ಮೂರು ವರ್ಷಗಳಿಂದ ಪಠ್ಯಕ್ರಮದಲ್ಲಿರುವುದು ಅತ್ಯಂತ ವಿಷಾದನೀಯ ಎಂದು ದೂರಿನಲ್ಲಿ ತಿಳಿಸಿರುವ ಎಬಿವಿಪಿ, “ಈ ಎಲ್ಲಾ ವರ್ಷಗಳಲ್ಲಿ ಮಾವೋವಾದಿಗಳ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ಯುವ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ” ಎಂದು ಆರೋಪಿಸಿತ್ತು.

ವಿವಿಯು ಪುಸ್ತಕವನ್ನು ವಾಪಾಸು ಪಡೆದಿರುವು ಎಬಿವಿಪಿಯ ಹೋರಾಟಕ್ಕೆ ದಕ್ಕಿದ ಗೆಲುವು ಎಂದು ತಮಿಳುನಾಡಿನ ಬಿಜೆಪಿ ವಕ್ತಾರ ಎಸ್‌‌.ಜಿ. ಸೂರ್ಯ ಹೇಳಿದ್ದಾರೆ.ಇದನ್ನೂ ಓದಿ:  ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರಆದರೆ ವಿವಿಯ ನಡೆಯನ್ನು ದ್ರಾವಿಡ ಮುನ್ನೇಟ್ರಾ ಕಳಗಮ್ ಸಂಸದೆ ಕನಿಮೋಳಿ ಟೀಕಿಸಿದ್ದು, “ಆಡಳಿತ ಮತ್ತು ರಾಜಕೀಯವು, ಯಾವ ಕಲೆ ಮತ್ತು ಯಾವ ಸಾಹಿತ್ಯವನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕೆಂಬುವುದನ್ನು ನಿರ್ಧರಿಸುವುದು ಸಮಾಜದ ವೈವಿಧ್ಯತೆಯನ್ನು ನಾಶಪಡಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಈ ಬಾರಿ ನೀವು ನಮ್ಮನ್ನು ತಡೆಯಲಾಗುವುದಿಲ್ಲ’: ಪ್ರತಿಭಟನೆಯಲ್ಲಿ ಅರುಂಧತಿ ರಾಯ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...