Homeಮುಖಪುಟಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

ಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

- Advertisement -
- Advertisement -

ಜೆಎನ್‌ಯು ಹಿಂಸಾಚಾರದಲ್ಲಿ ಮುಸುಕುಧಾರಿ ಕಾರ್ಯಕರ್ತರು ನಮ್ಮವರೇ ಆಗಿದ್ದು ‘ಆತ್ಮರಕ್ಷಣೆ’ಗಾಗಿ ಶಸ್ತ್ರಸಜ್ಜಿತರಾಗಿದ್ದರು ಎಂದು ಎಬಿವಿಪಿ ದೆಹಲಿ ಜಂಟಿ ಕಾರ್ಯದರ್ಶಿ ಅನಿಮಾ ಸೋಂಕರ್ ಒಪ್ಪಿಕೊಂಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟೈಮ್ಸ್‌ ನೌ ಚರ್ಚೆಯಲ್ಲಿ, ಟಿವಿ ನಿರೂಪಕಿ ಫೋಟೊವೊಂದನ್ನು ತೋರಿಸಿ ಈ ಇಬ್ಬರು abvp ಕಾರ್ಯಕರ್ತರು ಲಾಠಿ ಏಕೆ ಹಿಡಿದಕೊಂಡಿದ್ದಾರೆ ಎಂದು ಪ್ರಶ್ನೆ ಕೇಳಿದ್ದರು. ಆಗ ಉತ್ತರಿಸಿದ ಎಬಿವಿಪಿ ದೆಹಲಿ ಜಂಟಿ ಕಾರ್ಯದರ್ಶಿ ಅನಿಮಾ ಸೋಂಕರ್, ಅವರು ನಮ್ಮ ಕಾರ್ಯಕರ್ತರೆ ಆಗಿದ್ದು, ವಾಟ್ಸಾಪ್‌ಗಳಲ್ಲಿ ನಮ್ಮ ಮೇಲೆ ದಾಳಿ ನಡೆಯುತ್ತದೆ ಎಂದು ಭೀತ ಸೃಷ್ಟಿಸಲಾಗಿತ್ತು. ಅದಕ್ಕಾಗಿ ನಾವು ಜೆಎನ್‌ಯುನಲ್ಲಿರುವ ಎಬಿವಿಪಿ ಸದಸ್ಯರಿಗೆ ಸ್ವರಕ್ಷಣೆಗಾಗಿ ರಾಡ್‌ಗಳು, ಪೆಪ್ಪರ್ ಸ್ಪ್ರೇ ಮತ್ತು ಆಸಿಡ್ ಅನ್ನು ಜೊತೆಗಿಟ್ಟುಕೊಳ್ಳಿ ಎಂದು ಸೂಚಿಸಿದ್ದೆವು ಎಂದು ತಿಳಿಸಿದ್ದಾರೆ. ವಿಡಿಯೋ ನೋಡಿ

 

“ನಮ್ಮ ಎಲ್ಲಾ ವಾಟ್ಸಾಪ್ ಗುಂಪುಗಳಲ್ಲಿ ತುಂಬಾ ಭೀತಿ ಹರಡಿತ್ತು … ಆಗ ನಾವು ಆತ್ಮರಕ್ಷಣೆಗಾಗಿ ನೀವು ಎಲ್ಲಿಯಾದರೂ ಹೊರಗಡೆ ಹೋಗಬೇಕಾದರೆ ಗುಂಪುಗಳಾಗಿ ಹೋಗಿ, ಲಾಠಿ, ಕೋಲುಗಳನ್ನು ಜೊತೆಗಿಟ್ಟುಕೊಳ್ಳಿ, ನಿಮಗೆ ಏನಾದರೂ ಸಿಕ್ಕಿದರೆ ಅದು ಪೆಪ್ಪರ್ ಸ್ಪ್ರೇ, ಆಸಿಡ್ ನಂತದದು ಸಿಕ್ಕರೆ ಇಟ್ಟುಕೊಳ್ಳಿ ಎಂದು ಸೂಚಿಸಿದ್ದೆವು” ಎಂದು ಸೋಂಕರ್ ಹೇಳಿದ್ದಾರೆ.

ಇದನ್ನೂ ಓದಿ: JNU ನಲ್ಲಿ ಹಲ್ಲೆ ನಡೆಸಿದವರು ABVPಯೊಂದಿಗೆ ಸಂಬಂಧ ಹೊಂದಿದ್ದಾರೆ.. ಇಲ್ಲಿವೆ ನೋಡಿ ಸಾಕ್ಷ್ಯ…

ಜನವರಿ 5 ರ ಭಾನುವಾರ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಇದನ್ನು ಹೇಳಿದ್ದಾರೆ. ಆಗ ಭಾಗವಹಿಸಿಸಿದ್ದ ಇತರ ಪ್ಯಾನಲಿಸ್ಟ್‌ಗಳು ದಾಳಿಕೋರರು ಎಬಿವಿಪಿಯವರೆ ಎಂದು ರಾಷ್ಟ್ರೀಯ ಟಿವಿಯಲ್ಲಿಯೇ ಒಪ್ಪಿಕೊಂಡಿದ್ದಕ್ಕೆ ಥ್ಯಾಂಕ್ಸ್‌ ಸೋಂಕರ್‌ ಎಂದಿದ್ದಾರೆ.

ಆಗ ಕೂಡಲೇ ಮಾತು ಬದಲಿಸಿದ ಸೋಂಕೆರ ನಾನು ಆ ಅರ್ಥದಲ್ಲಿ ಹೇಳಲಿಲ್ಲ ಅವರು ಆತ್ಮರಕ್ಷಣೆಗಾಗಿ ಶಸ್ತ್ರಸಜ್ಜಿತರಾಗಿದ್ದಾರೆ ಎಂದಷ್ಟೇ ಹೇಳಿಕೆ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪೂರ್ಣ ಚರ್ಚೆ ಇಲ್ಲಿದೆ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...