Homeಮುಖಪುಟರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ABVP ಧ್ವಜ ಹಾರಾಟ: ಸಚಿವ ನಾಗೇಶ್ ವಿರುದ್ಧ ದೂರು

ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ABVP ಧ್ವಜ ಹಾರಾಟ: ಸಚಿವ ನಾಗೇಶ್ ವಿರುದ್ಧ ದೂರು

- Advertisement -
- Advertisement -

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ರವರ ನೇತೃತ್ವದಲ್ಲಿ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಿಸಿದ್ದಾರೆ ಎಂದು ಆರೋಪಿಸಿ ಸಿಂಧನೂರಿನಲ್ಲಿ ಸಚಿವ ನಾಗೇಶ್‌ರವರ ವಿರುದ್ಧ ದೂರು ದಾಖಲಾಗಿದೆ.

ಸಿಂಧನೂರಿನ ಸಾಮಾಜಿಕ ಕಾರ್ಯಕರ್ತರಾದ ಎಂ.ಗಂಗಾಧರ ಎಂಬುವವರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, “ಆಗಸ್ಟ್ 10 ರಂದು ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ ಅವರು ತಿಪಟೂರಿನಲ್ಲಿ ಶಾಲಾ ಸಿಬ್ಬಂದಿವರ್ಗ ಹಾಗೂ ಮಕ್ಕಳನ್ನು ಬಳಸಿಕೊಂಡು ತ್ರಿವರ್ಣಧ್ವಜ ಅಂದರೆ, ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುತ್ತಾರೆ. ಇದು ರಾಷ್ಟ್ರದ್ರೋಹಕ್ಕೆ ಸಮನಾದ ಅಪರಾಧವಾಗಿರುತ್ತದೆ, ಹಾಗಾಗಿ ಅವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದ್ದಾರೆ.

ಶಾಲಾ ಮಕ್ಕಳನ್ನು ಇಂತಹ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿಯಾಗಿದೆ. ಇದು ಒಬ್ಬ ಶಿಕ್ಷಣ ಸಚಿವರು ಭಾಗವಹಿಸುತ್ತಾರೆ ಎನ್ನುವುದಕ್ಕೆ ಎಬಿವಿಪಿ ಸಂಘಟನೆಯೊಂದಿಗೆ ಶಾಲಾ ಕಾಲೇಜಿನ ಉಪನ್ಯಾಸಕರುಗಳು ರಸ್ತೆಗೆ ಇಳಿದಿರುವುದು ದೇಶದ್ರೋಹವಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಧ್ವಜ ಸಂಹಿತೆ ಮತ್ತು ರಾಷ್ಟ್ರದ್ರೋಹದ ಅಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ.

ನಡೆದಿದ್ದೇನು?

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಆದರೆ ಅದಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜವನ್ನು ಹಿಡಿಯಲಾಗಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ದಾಖಲಾಗಿತ್ತು.

ಧ್ವಜ ಸಂಹಿತೆ ಏನು ಹೇಳುತ್ತದೆ?

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ಧ್ವಜ ಸಂಹಿತೆಯ ನಿಯಮ ( ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ವದರುತ್ತಿರುವವರಿಗೆ‌ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ‌ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್‌ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್‌ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...