ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಹ ಸಂಘಟನೆ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನಿಸಿರುವ ಘಟನೆ ಬುಧವಾರ ನಡೆದಿದೆ. ಮೆರವಣಿಗೆಯ ಉದ್ದಕ್ಕೂ ಎಬಿವಿಪಿಯ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಾಡಿಸಲಾಗಿದ್ದು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಅಲ್ಲದೆ ಮೆರವಣಿಗೆಯಲ್ಲಿ ಭಾಗವಹಿಸಿರುವುದರ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದಾರೆ.
'ಸ್ವಾತಂತ್ರ್ಯದ ಅಮೃತ ಮಹೋತ್ಸವ' ಅಂಗವಾಗಿ
ತಿಪಟೂರು ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ವತಿಯಿಂದ ಆಯೋಜಿಸಲಾಗಿದ್ದ 'ತಿರಂಗ ಯಾತ್ರೆ'ಯಲ್ಲಿ ಭಾಗವಹಿಸಿದೆ.@ABVPKarnataka#ಸ್ವಾತಂತ್ರ್ಯದಅಮೃತಮಹೋತ್ಸವ#AzadiKaAmritMahotsav #IndiaAt75 pic.twitter.com/dmXTuniN8B— B.C Nagesh (@BCNagesh_bjp) August 10, 2022
ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದು ಏನು?
- ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
- ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
- ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.
ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ಒದರುತ್ತಿರುವವರಿಗೆ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.
ವಿಧಾನ ಪರಿಷತ್ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.
ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆ.!
ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ,ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ.
ಕೂಡಲೇ@BCNagesh_bjpಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು pic.twitter.com/xIw8oe5lRg
— Hariprasad.B.K. (@HariprasadBK2) August 11, 2022



ಉಹ್…ಹೂ .. ತುಂಬಾ ದುಃಖ.. ಅದರಿಂದಾಗಿ ಆಕಾಶ ಕುಸಿಯುತ್ತಿದೆ 😥😜
ನಿಖರವಾಗಿ ಎಷ್ಟು ಮಿಲಿಮೀಟರ್ಗಳಷ್ಟು ಎತ್ತರಕ್ಕೆ ಹಾರಿತು?