Homeಕರ್ನಾಟಕಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, ‘ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು’ ಎಂದು ಹೇಳುತ್ತದೆ.

- Advertisement -
- Advertisement -

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಹ ಸಂಘಟನೆ ಎಬಿವಿಪಿ ಆಯೋಜಿಸಿದ್ದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನಿಸಿರುವ ಘಟನೆ ಬುಧವಾರ ನಡೆದಿದೆ. ಮೆರವಣಿಗೆಯ ಉದ್ದಕ್ಕೂ ಎಬಿವಿಪಿಯ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಾಡಿಸಲಾಗಿದ್ದು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ತಿಪಟೂರು ನಗರದಲ್ಲಿ ಎಬಿವಿಪಿ ಆಯೋಜಿಸಲಾಗಿದ್ದ ‘ತಿರಂಗ ಯಾತ್ರೆ’ಯಲ್ಲಿ ಸಚಿವ ನಾಗೇಶ್ ಭಾಗವಹಿಸಿದ್ದರು. ಭಾಗಶಃ ವಿದ್ಯಾರ್ಥಿನಿಯರೇ ಭಾಗವಹಿಸಿದ್ದ ಈ ಮೆರವಣಿಗೆಯಲ್ಲಿ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಹೆಜ್ಜೆ ಹಾಕಿದ್ದರು. ಅಲ್ಲದೆ ಮೆರವಣಿಗೆಯಲ್ಲಿ ಭಾಗವಹಿಸಿರುವುದರ ಬಗ್ಗೆ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಾಕಿದ್ದಾರೆ.

ರಾಷ್ಟ್ರಧ್ವಜಕ್ಕಾಗಿ ರೂಪಿಸಲಾಗಿರುವ ಧ್ವಜಸಂಹಿತೆ, “ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು” ಎಂದು ಹೇಳುತ್ತದೆ. ಆದರೆ ಸಚಿವ ನಾಗೇಶ್‌ ಅವರು ಭಾಗವಹಿಸಿದ್ದ ಮೆರವಣಿಗೆಯು ಧ್ವಜ ಸಂಹಿತೆಯ ಈ ನಿಯಮವನ್ನು ಉಲ್ಲಂಘಿಸಲಾಗಿದೆ.

ಧ್ವಜ ಸಂಹಿತೆಯ ನಿಯಮ ( ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ರಾಷ್ಟ್ರಧ್ವಜದ ‘ಧ್ವಜ ಸಂಹಿತೆ’ ಹೇಳುವುದು ಏನು?

  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜದ ಮೇಲೆ ಇಡಬಾರದು.
  • ಇತರ ಯಾವುದೇ ಧ್ವಜವನ್ನು ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಇಡಬಾರದು.

ಸಾಂವಿಧಾನಿಕ ಹುದ್ದೆಯಲ್ಲಿ ಇರುವ ಜನಪ್ರತಿನಿಧಿಯೊಬ್ಬ ಕಾನೂನು ಉಲ್ಲಂಘಿಸಿದ್ದು ರಾಜ್ಯದಾದ್ಯಂತ ಆಕ್ರೊಶ ಹುಟ್ಟು ಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚಿಂತಕ ಜಿಎನ್ ನಾಗರಾಜ್, “ಹರ್ ಘರ್ ಮೇ ತಿರಂಗಾ ಎಂದು ಒದರುತ್ತಿರುವವರಿಗೆ‌ ದೇಶಪ್ರಜ್ಞೆ ಇದ್ದರೆ ಸಂಪುಟದಿಂದ‌ ವಜಾ ಮಾಡಿ. ತಕ್ಷಣ ಈ ಅಪರಾಧ ಮಾಡಿದವರಿಗೆ ತಕ್ಕ ಕಾನೂನಿನ ಶಿಕ್ಷೆ ನೀಡಿ” ಎಂದು ಕಿಡಿ ಕಾರಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ವಿಪಕ್ಷದ ನಾಯಕರಾಗಿರುವ ಹರಿಪ್ರಸಾದ್‌ ಅವರು, ತ್ರಿವರ್ಣ ಧ್ವಜದ ಮೇಲೆ ಯಾವ ಧ್ವಜವನ್ನೇ ಹಾರಿಸುವುದು ಧ್ವಜ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. “ಶಿಕ್ಷಣ ಸಚಿವರಿಗೆ ಕನಿಷ್ಟ ಕಾನೂನಿನ ತಿಳುವಳಿಕೆ ಇಲ್ಲದೆ, ಭಾಗವಧ್ವಜವನ್ನ ತ್ರಿವರ್ಣ ಧ್ವಜಕ್ಕಿಂತ ಎತ್ತರವಾಗಿ ಹಿಡಿದುಕೊಂಡು ಅಪರಾಧ ಮಾಡಿದ್ದಲ್ಲದೇ RSS ಮನಸ್ಥಿತಿಯನ್ನ ತೋರಿಸಿದ್ದಾರೆ. ಕೂಡಲೇ ಬಿಸಿ ನಾಗೇಶ್‌ ಮೇಲೆ ದ್ವಜಸಂಹಿತೆಯಡಿ ಕೇಸ್ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಉಹ್…ಹೂ .. ತುಂಬಾ ದುಃಖ.. ಅದರಿಂದಾಗಿ ಆಕಾಶ ಕುಸಿಯುತ್ತಿದೆ 😥😜
    ನಿಖರವಾಗಿ ಎಷ್ಟು ಮಿಲಿಮೀಟರ್ಗಳಷ್ಟು ಎತ್ತರಕ್ಕೆ ಹಾರಿತು?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...