Homeಕರ್ನಾಟಕಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

ಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

- Advertisement -
- Advertisement -

ಸಂಘಪರಿವಾರದ ಸದಸ್ಯೆ ಪೂಜಾ ವೀರಶೆಟ್ಟಿ ಎಂಬವರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದ್ದು, “ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಯುವತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ಸಂಬಂಧ ‘ನಾನುಗೌರಿ.ಕಾಂ’ ತಂಡವು ಹಲವು ಬಾರಿ ಎಚ್.ಡಿ.ಆನಂದಕುಮಾರ್‌ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿರಲಿಲ್ಲ. ಇಂದು ಸಂಪರ್ಕಕ್ಕೆ ಸಿಕ್ಕಿದ ಅವರು, ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿದರು. “ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಯಾರೂ ಈವರೆಗೆ ದೂರು ನೀಡಿಲ್ಲ” ಎಂದು ಅವರು ತಿಳಿಸಿದಾಗ, “ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿಯವರ ಗಮನ ಸೆಳೆಯಲಾಯಿತು. “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

ಇದನ್ನೂ ಓದಿರಿ: ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆಗಳು ಕೇಳಿಬಂದಿದ್ದವು. ಪ್ರಕರಣ ಸಂಬಂಧಿಸಿದಂತೆ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆ ನೀಡಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...