Homeಕರ್ನಾಟಕಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

ಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

- Advertisement -
- Advertisement -

ಸಂಘಪರಿವಾರದ ಸದಸ್ಯೆ ಪೂಜಾ ವೀರಶೆಟ್ಟಿ ಎಂಬವರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದ್ದು, “ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಯುವತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ಸಂಬಂಧ ‘ನಾನುಗೌರಿ.ಕಾಂ’ ತಂಡವು ಹಲವು ಬಾರಿ ಎಚ್.ಡಿ.ಆನಂದಕುಮಾರ್‌ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿರಲಿಲ್ಲ. ಇಂದು ಸಂಪರ್ಕಕ್ಕೆ ಸಿಕ್ಕಿದ ಅವರು, ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿದರು. “ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಯಾರೂ ಈವರೆಗೆ ದೂರು ನೀಡಿಲ್ಲ” ಎಂದು ಅವರು ತಿಳಿಸಿದಾಗ, “ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿಯವರ ಗಮನ ಸೆಳೆಯಲಾಯಿತು. “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

ಇದನ್ನೂ ಓದಿರಿ: ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆಗಳು ಕೇಳಿಬಂದಿದ್ದವು. ಪ್ರಕರಣ ಸಂಬಂಧಿಸಿದಂತೆ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆ ನೀಡಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...