Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...