Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...