Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...