Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....