Homeಮುಖಪುಟಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ಪೊಲೀಸ್‌ ಮತ್ತು ಸೆಕ್ಯೂರಿಟಿ ಗಾರ್ಡ್‌ಗಳ ಮುಂದೆಯೆ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -
- Advertisement -

ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕಾವೇರಿ ಹಾಸ್ಟೆಲ್‌ನಲ್ಲಿ ರಾಮ ನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ಆಗ್ರಹಿಸಿ ‘ಎಬಿವಿಪಿ ದುಷ್ಕರ್ಮಿ’ಗಳು ಸೋಮವಾರ ದಾಳಿ ಮಾಡಿದ್ದು ಸುಮಾರು ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಸಂಜೆ ಸುಮಾರು 05:30ರ ಹೊತ್ತಿಗೆ ಕಾವೇರಿ ಹಾಸ್ಟೆಲ್‌ ಪ್ರವೇಶಿಸಿ ಅಡುಗೆ ಮಾಡುವವರೊಂದಿಗೆ ರಾಮ ನವಮಿಯ ಕಾರಣಕ್ಕೆ ಮಾಂಸಾಹಾರ ಮಾಡಬಾರದು ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಮೆಸ್‌ ಕಾರ್ಯದರ್ಶಿ ಇದನ್ನು ವಿರೋಧಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಸೇರಲು ಆರಂಭಿಸಿದಾಗ ದೊಣ್ಣೆಗಳೊಂದಿಗೆ ಬಂದಿದ್ದ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೆಎನ್‌ಯು ಹಾಸ್ಟೆಲ್‌ನಲ್ಲಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹೀಗೆ ವಾರಕ್ಕೆ ಮೂರು ದಿನಗಳು ಮಾಂಸಾಹಾರವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಮಾಂಸಾಹಾರಿಗಳು ಅಲ್ಲದ ವಿದ್ಯಾರ್ಥಿಗಳಿಗೆ ಆ ದಿನ ಪನೀರ್‌ ತರಹದ ಸಸ್ಯಾಹಾರವನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡುತ್ತಿದ್ದಾಗ ಅಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗಳು ಸುಮ್ಮನೆ ನಿಂತು ನೋಡುತ್ತಿದ್ದರು ಮತ್ತು ಪೊಲೀಸರಿಗೆ ಕರೆ ಮಾಡಿ ಅವರು ಬಂದ ನಂತರ ಕೂಡಾ ಅವರ ಮುಂದೆಯೆ ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಜೆಎನ್‌ಯು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜೆಎನ್‌ಯು ವಿದ್ಯಾರ್ಥಿನಿ ಉದಿತಾ ಅವರು, “ನಿನ್ನೆ ರಾತ್ರಿ ನಾವು ಪೊಲೀಸರಿಗೆ ದೂರು ನೀಡಿ ಆಗ್ರಹಗಳನ್ನು ಸಲ್ಲಿಸಿ ಬಂದಿದ್ದೇವೆ. ಇಂದು ಎರಡು ಗಂಟೆಗೆ ದೆಹಲಿ ಪೊಲೀಸರ ವಿರುದ್ಧ ಪ್ರತಿಭಟನೆ ಆಯೋಜಿಸಿದ್ದೇವೆ” ಎಂದು ಹೇಳಿದ್ದಾರೆ. ಎಬಿವಿಪಿಯ ದುಷ್ಕರ್ಮಿಗಳ ದಾಳಿಯಲ್ಲಿ ಉದಿತಾ ಅವರು ಕೂಡಾ ಗಾಯಗೊಂಡಿದ್ದಾರೆ.

“ಹಾಸ್ಟೆಲ್‌ನಲ್ಲಿ ವಾರಕ್ಕೆ ಮೂರು ದಿನ ಮಾಂಸಾಹಾರ ನೀಡುತ್ತಾರೆ. ರಾಮನವಮಿ ದಿನ ಮಾಂಸಾಹಾರ ಮಾಡಬಾರದು ಎಂದು ದಾಳಿ ಮಾಡಲಾಗಿದೆ. ಮಾಂಸಾಹಾರದ ವಿಚಾರದಲ್ಲಿ ಒಂದು ದಿನ ನಾವು ಕೂಡಾ ರಾಜಿ ಆಗುತ್ತೇವೆ. ಆದರೆ ಇದು ಕೇವಲ ರಾಜಿಯ ವಿಚಾರವಲ್ಲ. ಇದು ನಮ್ಮ ಆಹಾರದ ಆಯ್ಕೆಯ ಹಕ್ಕಿನ ಪ್ರಶ್ನೆ. ಇಂತಹ ಸಮಯದಲ್ಲಿ ಇಂತಹ ಆಹಾರ ತಿನ್ನಬೇಕು ಎಂದು ಯಾರಿಗೂ ಹೇಳುವ ಅಧಿಕಾರ ಯಾರಿಗೂ ಇಲ್ಲ. ಯಾರಿಗೂ ಯಾವುದೇ ಸಮಯಲ್ಲಿ ಯಾವುದೆ ಆಹಾರ ತಿನ್ನುವ ಹಕ್ಕಿದೆ” ಎಂದು ಉದಿತಾ ಹೇಳಿದ್ದಾರೆ.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

“ದಾಳಿಯ ಸಮಯದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ವಿದ್ಯಾರ್ಥಿಗಳನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸಿದ್ದಾರೆ. ನನಗೆ ಸೇರಿದಂತೆ ಇನ್ನೂ ಹದಿನೈದು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಮೂವರಿಗೆ ಕೊಲೆ ಬೆದರಿಕೆಯನ್ನೂ ಒಡ್ಡಲಾಗಿದೆ. ಸರಣಿಯಾಗಿ ಅಪರಾಧ ಮಾಡುವ ಕೆಲವರ ಹೆಸರನ್ನು ನಾವು ದೂರಿನಲ್ಲಿ ನೀಡಿದ್ದೇವೆ. ಜೊತೆಗೆ ಕೆಲವು ಆಗ್ರಹಗಳನ್ನೂ ದೆಹಲಿ ಪೊಲೀಸರ ಮುಂದೆ ಇಟ್ಟಿದ್ದೇವೆ” ಎಂದು ಉದಿತಾ ಅವರು ತಿಳಿಸಿದ್ದಾರೆ.

ಎಬಿವಿಪಿ ದುಷ್ಕರ್ಮಿಗಳ ಈ ದಾಳಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆಯಲ್ಲಿ ರಾತ್ರಿ ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದಾಗಿ ಜೆಎನ್‌ಯು ವಿದ್ಯಾರ್ಥಿನಿ ಅಪರ್ಣ ಹೇಳಿದ್ದಾರೆ. “ಹತ್ತರಿಂದ ಹದಿನೈದು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾವೆ. ನನ್ನ ಬ್ಯಾಚ್‌ನ ವಿದ್ಯಾರ್ಥಿನಿಯೊಬ್ಬಳಿಗೆ ತಲೆ ಮತ್ತು ಕಣ್ಣಿನ ಭಾಗದಲ್ಲಿ ತೀವ್ರ ರೀತಿಯಲ್ಲಿ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ದಾಳಿಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ದಾಳಿಯನ್ನು ವಿರೋಧಿಸಿ ನಾವು ರಾತ್ರಿ ಸುಮಾರು ಮೂರು ಗಂಟೆಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಪೊಲೀಸರು ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ. ದಾಳಿಗೊಳಗಾದ ವಿದ್ಯಾರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (ಎಮ್‌ಎಲ್‌ಸಿ) ದಾಖಲಿಸಿದ್ದಾರೆ” ಎಂದು ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಿಚಿತ ಎಬಿವಿಪಿ ಸದಸ್ಯರ ವಿರುದ್ಧ ಎಫ್‌ಐಆರ್‌‌ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಜವಾಹರಲಾಲ್ ನೆಹರು ಸ್ಟೂಡೆಂಟ್ಸ್ ಯೂನಿಯನ್ (ಜೆಎನ್‌ಯುಎಸ್‌ಯು), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ವಿದ್ಯಾರ್ಥಿ ಸಂಘಟನೆಗಳು ಸೋಮವಾರ ದೂರು ನೀಡಿವೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ. “ವಾಸ್ತವ, ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಳೆಯ ಟ್ವೀಟ್‌ಗಳು ವೈರಲ್: ನಾನು ಟ್ವಿಟರ್‌ನಲ್ಲಿ ಇರಲಿಲ್ಲ ಎಂದ ಜೆಎನ್‌ಯು ನೂತನ ಉಪಕುಲಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...