Homeಕರ್ನಾಟಕವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ...

ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ ABVP

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಈತ ಮುಖ್ಯಸ್ಥನಾಗಿದ್ದ ತೀರ್ಥಹಳ್ಳಿ ABVP ಘಟಕ, ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದನು. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ NSUI ತೀರ್ಥಹಳ್ಳಿ ಘಟಕ ಆತನ ಮೇಲೆ ದೂರು ದಾಖಲಿಸಿತ್ತು.

ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ: ABVP

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ತೀರ್ಥಹಳ್ಳಿ ABVP ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಪ್ಪೆ ಸಾರಿಸೋಕೆ ಹೊರಟಿದೆ.

ಸಂಘ ಪರಿವಾರದ ಕಾರ್ಯಕರ್ತರು ಇಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿದರೂ ಇದೇ ರೀತಿ ನಮಗೂ ಅವನಿಗೂ ಸಂಬಂಧವೇ ಇಲ್ಲ ಹೇಳುತ್ತದೆ. ಇದೀಗ ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೂಡ ಇದೇ ರೀತಿಯ ಮಾರ್ಗ ಉಪಯೋಗಿಸಿ ತಪ್ಪಿಸಿಕೊಳ್ಳುತ್ತೆ.

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಫೋಟೋ ಸಾಕ್ಷಿ:

Karnataka: ABVP Leader Arrested In Thirthahalli For Filming Nude Videos Of Girls | Crime News, Times Now

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಎನ್ನುವುದು ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲೇ ದಾಖಲಾಗಿದೆ. ಅಷ್ಟೇ ಅಲ್ಲದ ಸಂಘಟನೆಯ ವಿದ್ಯಾರ್ಥಿಗಳು ಕೂಡ ಆತ ಎಬಿವಿಪಿ ತಾಲೂಕು ಅಧ್ಯಕ್ಷ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಕೇವಲ ಎರಡು ತಿಂಗಳ ಹಿಂದೆ ನಡೆದ ABVP ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ವೇದಿಕೆಯನ್ನೇ ಹಂಚಿಕೊಂಡ ಫೋಟೋಗಳೇ ಈತ ಆ ಸಂಘಟನೆ ಪದಾಧಿಕಾರಿ ಎಂಬುದಕ್ಕೆ ಸಾಕ್ಷ್ಯಯಾಗಿದೆ. ಆದರೆ ಎಬಿವಿಪಿ ತೀರ್ಥಹಳ್ಳಿ ತಾಲೂಕು ಘಟಕವು ಪ್ರತೀಕ್‌ನನ್ನು ಜನವರಿಯಲ್ಲೇ ಅಧ್ಯಕ್ಷ ಸ್ಥಾನದಿಂದ ವಜಾಮಾಡಲಾಗಿದೆ ಎಂದು ಸುಳ್ಳು ಹೇಳುತ್ತಿದೆ.

 

ಪ್ರತೀಕ್‌ ಮೇಲೆ ಇಂತಹ ಆರೋಪ ಇದೇ ಮೊದಲೇನಲ್ಲ ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿವೆ.

ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ, ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡನನ್ನು ಬಂಧಿಸಲಾಗಿದೆ.

ಈ ಪ್ರತಿಗೌಡ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಕಠೋರ ಹಿಂದು, ಗಾಂಚಾಲಿ, ಧರ್ಮೋ ರಕ್ಷತಿ ರಕ್ಷಿತಃ, ಒಕ್ಕಲಿಗ, ಎಬಿವಿಪಿಯನ್ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಎಬಿವಿಪಿಯ ತಾಲ್ಲೂಕು ಅಧ್ಯಕ್ಷನಾಗಿದ್ದುಕೊಂಡು ಉಳಿದವರಿಗೆಲ್ಲ ನಮ್ಮ ಸಂಸ್ಕೃತಿ, ಪರಂಪರೆ ಎಂದು ಭಾಷಣ ಬಿಗಿಯುವ ಈತ ತಾನು ಮಾತ್ರ ಹೆಣ್ಮಕ್ಕಳ ಮಾನ ತೆಗೆಯುವ ವಿಕೃತ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಅದಕ್ಕಾಗಿ ಸಂಘಟನೆಯಲ್ಲಿ ತನಗೆ ಸಿಕ್ಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾನೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...