Homeಕರ್ನಾಟಕವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ...

ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ ABVP

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಈತ ಮುಖ್ಯಸ್ಥನಾಗಿದ್ದ ತೀರ್ಥಹಳ್ಳಿ ABVP ಘಟಕ, ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದನು. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ NSUI ತೀರ್ಥಹಳ್ಳಿ ಘಟಕ ಆತನ ಮೇಲೆ ದೂರು ದಾಖಲಿಸಿತ್ತು.

ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ: ABVP

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ತೀರ್ಥಹಳ್ಳಿ ABVP ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಪ್ಪೆ ಸಾರಿಸೋಕೆ ಹೊರಟಿದೆ.

ಸಂಘ ಪರಿವಾರದ ಕಾರ್ಯಕರ್ತರು ಇಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿದರೂ ಇದೇ ರೀತಿ ನಮಗೂ ಅವನಿಗೂ ಸಂಬಂಧವೇ ಇಲ್ಲ ಹೇಳುತ್ತದೆ. ಇದೀಗ ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೂಡ ಇದೇ ರೀತಿಯ ಮಾರ್ಗ ಉಪಯೋಗಿಸಿ ತಪ್ಪಿಸಿಕೊಳ್ಳುತ್ತೆ.

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಫೋಟೋ ಸಾಕ್ಷಿ:

Karnataka: ABVP Leader Arrested In Thirthahalli For Filming Nude Videos Of Girls | Crime News, Times Now

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಎನ್ನುವುದು ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲೇ ದಾಖಲಾಗಿದೆ. ಅಷ್ಟೇ ಅಲ್ಲದ ಸಂಘಟನೆಯ ವಿದ್ಯಾರ್ಥಿಗಳು ಕೂಡ ಆತ ಎಬಿವಿಪಿ ತಾಲೂಕು ಅಧ್ಯಕ್ಷ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಕೇವಲ ಎರಡು ತಿಂಗಳ ಹಿಂದೆ ನಡೆದ ABVP ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ವೇದಿಕೆಯನ್ನೇ ಹಂಚಿಕೊಂಡ ಫೋಟೋಗಳೇ ಈತ ಆ ಸಂಘಟನೆ ಪದಾಧಿಕಾರಿ ಎಂಬುದಕ್ಕೆ ಸಾಕ್ಷ್ಯಯಾಗಿದೆ. ಆದರೆ ಎಬಿವಿಪಿ ತೀರ್ಥಹಳ್ಳಿ ತಾಲೂಕು ಘಟಕವು ಪ್ರತೀಕ್‌ನನ್ನು ಜನವರಿಯಲ್ಲೇ ಅಧ್ಯಕ್ಷ ಸ್ಥಾನದಿಂದ ವಜಾಮಾಡಲಾಗಿದೆ ಎಂದು ಸುಳ್ಳು ಹೇಳುತ್ತಿದೆ.

 

ಪ್ರತೀಕ್‌ ಮೇಲೆ ಇಂತಹ ಆರೋಪ ಇದೇ ಮೊದಲೇನಲ್ಲ ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿವೆ.

ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ, ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡನನ್ನು ಬಂಧಿಸಲಾಗಿದೆ.

ಈ ಪ್ರತಿಗೌಡ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಕಠೋರ ಹಿಂದು, ಗಾಂಚಾಲಿ, ಧರ್ಮೋ ರಕ್ಷತಿ ರಕ್ಷಿತಃ, ಒಕ್ಕಲಿಗ, ಎಬಿವಿಪಿಯನ್ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಎಬಿವಿಪಿಯ ತಾಲ್ಲೂಕು ಅಧ್ಯಕ್ಷನಾಗಿದ್ದುಕೊಂಡು ಉಳಿದವರಿಗೆಲ್ಲ ನಮ್ಮ ಸಂಸ್ಕೃತಿ, ಪರಂಪರೆ ಎಂದು ಭಾಷಣ ಬಿಗಿಯುವ ಈತ ತಾನು ಮಾತ್ರ ಹೆಣ್ಮಕ್ಕಳ ಮಾನ ತೆಗೆಯುವ ವಿಕೃತ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಅದಕ್ಕಾಗಿ ಸಂಘಟನೆಯಲ್ಲಿ ತನಗೆ ಸಿಕ್ಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾನೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...