Homeಕರ್ನಾಟಕವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ...

ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಹರಿಬಿಟ್ಟ ಎಬಿವಿಪಿ ಅಧ್ಯಕ್ಷನ ಬಂಧನ: ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದ ABVP

- Advertisement -
- Advertisement -

ಕಾಲೇಜು ವಿದ್ಯಾರ್ಥಿನಿಯರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಈತ ಮುಖ್ಯಸ್ಥನಾಗಿದ್ದ ತೀರ್ಥಹಳ್ಳಿ ABVP ಘಟಕ, ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತಿಗೌಡ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದನು. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದನು. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದನು ಎಂದು ಆರೋಪಿಸಿ NSUI ತೀರ್ಥಹಳ್ಳಿ ಘಟಕ ಆತನ ಮೇಲೆ ದೂರು ದಾಖಲಿಸಿತ್ತು.

ಆತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ: ABVP

ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ತೀರ್ಥಹಳ್ಳಿ ABVP ಘಟಕವು ಪ್ರತೀಕ್ ಗೌಡ ನಮ್ಮ ಸಂಘಟನೆಯಲ್ಲೇ ಇಲ್ಲ. ಈತನಿಗೂ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಪ್ಪೆ ಸಾರಿಸೋಕೆ ಹೊರಟಿದೆ.

ಸಂಘ ಪರಿವಾರದ ಕಾರ್ಯಕರ್ತರು ಇಂತಹ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಸಿದರೂ ಇದೇ ರೀತಿ ನಮಗೂ ಅವನಿಗೂ ಸಂಬಂಧವೇ ಇಲ್ಲ ಹೇಳುತ್ತದೆ. ಇದೀಗ ಅದರ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೂಡ ಇದೇ ರೀತಿಯ ಮಾರ್ಗ ಉಪಯೋಗಿಸಿ ತಪ್ಪಿಸಿಕೊಳ್ಳುತ್ತೆ.

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಫೋಟೋ ಸಾಕ್ಷಿ:

Karnataka: ABVP Leader Arrested In Thirthahalli For Filming Nude Videos Of Girls | Crime News, Times Now

ಪ್ರತೀಕ್ ಗೌಡ ABVP ತಾಲ್ಲೂಕು ಮುಖ್ಯಸ್ಥ ಎನ್ನುವುದು ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲೇ ದಾಖಲಾಗಿದೆ. ಅಷ್ಟೇ ಅಲ್ಲದ ಸಂಘಟನೆಯ ವಿದ್ಯಾರ್ಥಿಗಳು ಕೂಡ ಆತ ಎಬಿವಿಪಿ ತಾಲೂಕು ಅಧ್ಯಕ್ಷ ಎನ್ನುವುದನ್ನು ಹೇಳಿಕೊಂಡಿದ್ದಾರೆ. ಕೇವಲ ಎರಡು ತಿಂಗಳ ಹಿಂದೆ ನಡೆದ ABVP ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ವೇದಿಕೆಯನ್ನೇ ಹಂಚಿಕೊಂಡ ಫೋಟೋಗಳೇ ಈತ ಆ ಸಂಘಟನೆ ಪದಾಧಿಕಾರಿ ಎಂಬುದಕ್ಕೆ ಸಾಕ್ಷ್ಯಯಾಗಿದೆ. ಆದರೆ ಎಬಿವಿಪಿ ತೀರ್ಥಹಳ್ಳಿ ತಾಲೂಕು ಘಟಕವು ಪ್ರತೀಕ್‌ನನ್ನು ಜನವರಿಯಲ್ಲೇ ಅಧ್ಯಕ್ಷ ಸ್ಥಾನದಿಂದ ವಜಾಮಾಡಲಾಗಿದೆ ಎಂದು ಸುಳ್ಳು ಹೇಳುತ್ತಿದೆ.

 

ಪ್ರತೀಕ್‌ ಮೇಲೆ ಇಂತಹ ಆರೋಪ ಇದೇ ಮೊದಲೇನಲ್ಲ ಈ ಹಿಂದೆಯೂ ಸಹ ಎಬಿವಿಪಿ ವಿದ್ಯಾರ್ಥಿನಿಯರನ್ನೇ ಮರಳು ಮಾಡಿ ಈ ರೀತಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿ ಹಲವರಿಂದ ಹಣ ಸಹ ವಸೂಲಿ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿವೆ.

ಜೂನ್ 16ರಂದು ಎರಡು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಡಿವೈಎಸ್‌ಪಿಯವರಿಗೆ ದೂರು ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ, ಎಬಿವಿಪಿ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಪ್ರತೀಕ್ ಗೌಡನನ್ನು ಬಂಧಿಸಲಾಗಿದೆ.

ಈ ಪ್ರತಿಗೌಡ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಕಠೋರ ಹಿಂದು, ಗಾಂಚಾಲಿ, ಧರ್ಮೋ ರಕ್ಷತಿ ರಕ್ಷಿತಃ, ಒಕ್ಕಲಿಗ, ಎಬಿವಿಪಿಯನ್ ಎಂದು ಬರೆದುಕೊಂಡಿರುವುದು ಕಂಡುಬಂದಿದೆ.

ಎಬಿವಿಪಿಯ ತಾಲ್ಲೂಕು ಅಧ್ಯಕ್ಷನಾಗಿದ್ದುಕೊಂಡು ಉಳಿದವರಿಗೆಲ್ಲ ನಮ್ಮ ಸಂಸ್ಕೃತಿ, ಪರಂಪರೆ ಎಂದು ಭಾಷಣ ಬಿಗಿಯುವ ಈತ ತಾನು ಮಾತ್ರ ಹೆಣ್ಮಕ್ಕಳ ಮಾನ ತೆಗೆಯುವ ವಿಕೃತ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಅದಕ್ಕಾಗಿ ಸಂಘಟನೆಯಲ್ಲಿ ತನಗೆ ಸಿಕ್ಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾನೆ.

ಇದನ್ನೂ ಓದಿ: ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ತೀರ್ಥಹಳ್ಳಿ ABVP ಅಧ್ಯಕ್ಷನ ಬಂಧನಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...