Homeಮುಖಪುಟಕಾಲೇಜು ಕ್ಯಾಂಪಸ್‌ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ : ಎಬಿವಿಪಿ ಪ್ರತಿಭಟನೆ

ಕಾಲೇಜು ಕ್ಯಾಂಪಸ್‌ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ : ಎಬಿವಿಪಿ ಪ್ರತಿಭಟನೆ

- Advertisement -
- Advertisement -

ಮಧ್ಯ ಪ್ರದೇಶದ ಇಂದೋರ್‌ನ ಕಾಲೇಜೊಂದರಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಯ ಸದಸ್ಯತ್ವ ಅಭಿಯಾನದ ವಿರುದ್ದ ಅದರ ಸಹೋದರ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಪ್ರತಿಭಟನೆ ನಡೆಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸರ್ಕಾರಿ ಹೋಳ್ಕರ್ ವಿಜ್ಞಾನ ಕಾಲೇಜಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿತ್ತು. ಈ ಸಂಬಂಧ ಪ್ರಾಂಶುಪಾಲರ ವಿರುದ್ಧ ಪ್ರತಿಭಟಿಸಿದ ಎಬಿವಿಪಿ ಕಾರ್ಯಕರ್ತರು, “ವಿದ್ಯಾ ದೇಗುಲವನ್ನು ರಾಜಕೀಯ ಕೇಂದ್ರವಾಗಿ ಪರಿವರ್ತಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಆರ್‌ಎಸ್‌ಎಸ್‌ನ ಅಂಗಗಳಾದ ಬಿಜೆಪಿ ಮತ್ತು ಎಬಿವಿಪಿ ಪರಸ್ಪರ ಜಟಾಪಟಿಗೆ ಇಳಿದ ಹಿನ್ನೆಲೆ,
ಇಂದೋರ್-3 ಕ್ಷೇತ್ರದ ಬಿಜೆಪಿ ಶಾಸಕ ರಾಕೇಶ್ ಶುಕ್ಲಾ ಮತ್ತು ಬಿಜೆಪಿ ಇಂದೋರ್ ನಗರ ಮುಖ್ಯಸ್ಥ ಗೌರವ್ ರಣದಿವ್ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸಿದ್ದಾರೆ.

ಈ ನಡುವೆ ಎಬಿವಿಪಿಗೆ ಗೊತ್ತಿಲ್ಲದಂತೆ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಟಿ ಸಿಲಾವತ್ ಅವರು ಕಾಲೇಜಿನಲ್ಲಿ ರಾಜಕೀಯ ಕಾರ್ಯಕ್ರಮಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ.

ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಬಿವಿಪಿ ಇಂದೋರ್ ನಗರ ಕಾರ್ಯದರ್ಶಿ ರಿತೇಶ್ ಪಟೇಲ್, “ಕಾಲೇಜು ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಸದಸ್ಯತ್ವ ಅಭಿಯಾನ ನಡೆಸುತ್ತಿರುವುದನ್ನು ಕಂಡು ಬಂತು. ಕಾಲೇಜಿನಲ್ಲಿ ಏಕೆ ಸದಸ್ಯತ್ವ ಮಾಡುತ್ತಿದ್ದೀರಿ ಎಂದು ನಾವು ಪ್ರಶ್ನಿಸಿದೆವು. ಆಗ ಅವರು ಪ್ರಾಂಶುಪಾಲರು ಅನುಮತಿ ನೀಡಿದ್ದಾರೆ ಎಂದರು. ನಾವು ಪ್ರಾಂಶುಪಾಲರನ್ನು ಕೇಳಿದಾಗ “ನಾವು ಅವರಿಗೆ ಅನುಮತಿ ನಿರಾಕರಿಸಲು ಸಾಧ್ಯವಿಲ್ಲ” ಎಂದರು. ಹಾಗಾಗಿ, ನಾವು ಪ್ರತಿಭಟಿಸಿದೆವು” ಎಂದಿದ್ದಾರೆ.

ಇವತ್ತು ಬಿಜೆಪಿ ಬಂದ್ರೆ, ನಾಳೆ ಇನ್ಯಾವುದೋ ಪಕ್ಷ ಬರುತ್ತೆ. ಇದು ಜ್ಞಾನ ದೇಗುಲ, ರಾಜಕೀಯ ಕೇಂದ್ರ ಆಗಬಾರದು ಎಂದು ನಾವು ಅವರಿಗೆ (ಬಿಜೆಪಿ) ಹೇಳಿದ್ದೇವೆ ಎಂದು ರಿತೇಶ್ ಪಟೇಲ್ ವಿವರಿಸಿದ್ದಾರೆ.

ತಪ್ಪು ತಿಳುವಳಿಕೆಯಿಂದ ಈ ಘಟನೆ ನಡೆದಿದೆ ಎಂದು ಬಿಜೆಪಿ ಇಂದೋರ್ ನಗರ ಮುಖ್ಯಸ್ಥ ಗೌರವ್ ರಣದಿವ್ ಪ್ರತಿಕ್ರಿಯಿಸಿದ್ದಾರೆ. ಎಬಿವಿಪಿ ಕ್ಯಾಂಪಸ್ ಒಳಗೆ ಮತ್ತು ನಾವು ಹೊರಗೆ ಕಾರ್ಯಾಚರಣೆ ಮಾಡುತ್ತೇವೆ. ನಾವು ಕ್ಯಾಂಪಸ್ ಹೊರಗೆ ಸದಸ್ಯತ್ವ ಅಭಿಯಾನ ಕೈಗೊಂಡಿದ್ದೆವು. ಈ ಬಗ್ಗೆ ಎಬಿವಿಪಿಯವರಿಗೆ ಮನವರಿಗೆ ಮಾಡಿಕೊಡಲು ಪ್ರಯತ್ನಿಸಿದರೂ ಆಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...