Homeಕರ್ನಾಟಕಶೈಕ್ಷಣಿಕ ವರ್ಷ ಮುಗಿಯುತ್ತಿದ್ದರೂ ದಲಿತ ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್‌ಶಿಪ್ - ಒಪ್ಪಿಕೊಂಡ ಸರ್ಕಾರ

ಶೈಕ್ಷಣಿಕ ವರ್ಷ ಮುಗಿಯುತ್ತಿದ್ದರೂ ದಲಿತ ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್‌ಶಿಪ್ – ಒಪ್ಪಿಕೊಂಡ ಸರ್ಕಾರ

- Advertisement -
- Advertisement -

2024ನೇ ಸಾಲಿನ ಶೈಕ್ಷಣಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ ಒಪ್ಪಿಕೊಂಡಿದೆ. ಅದಾಗ್ಯೂ, ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆ ಸಾಮಾಜಿಕ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಮಹದೇವಪ್ಪ ಅವರು, “2024-25ನೇ ಸಾಲಿನಲ್ಲಿ ಮೆಟ್ರಿ ಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿ ಹಾಗೂ ಪಾವತಿಯು ಪ್ರಗತಿಯಲ್ಲಿದೆ” ಎಂದು ಹೇಳಿದ್ದಾರೆ. ಶೈಕ್ಷಣಿಕ ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 9,12,801 ಅರ್ಜಿಗಳನ್ನು ಸ್ವೀಕರಿಸಿಸಲಾಗಿದೆ” ಎಂದು ಅವರು ಉತ್ತರಿಸಿದ್ದಾರೆ.

“ಸ್ವೀಕರಿಸಲಾದ ಅರ್ಜಿಗಳಲ್ಲಿ ಇಲ್ಲಿಯವರೆಗೆ 8,07,515 ಅರ್ಜಿಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ 7,55,125 ವಿದ್ಯಾರ್ಥಿಗಳಿಗೆ ಒಟ್ಟಾರೆ 107.34 ಕೋಟಿ ರೂ. ವಿದ್ಯಾರ್ಥಿ ವೇತನ ಪಾವತಿಯಾಗಿದೆ. ಸ್ವೀಕರಿಸಿರುವ ಅರ್ಜಿಗಳ ಅಂಕಿ ಅಂಶಗಳ ಪ್ರಕಾರ ಇನ್ನೂ 1,05,286 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಲು ಬಾಕಿ ಇದೆ” ಎಂದು ಸಚಿವರು ಹೇಳಿದ್ದಾರೆ.

“ಈ ಅರ್ಜಿಗಳಿಗೆ ಅನುಮೋದನೆ ಸಿಕ್ಕ ನಂತರವಷ್ಟೇ ವಿದ್ಯಾರ್ಥಿ ವೇತನವು ಮಂಜೂರಾಗಲಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಒಟ್ಟು 4,63,347 ಅರ್ಜಿಗಳನ್ನು ಸ್ವೀಕರಿಸಿದೆ. ಈ ಪೈಕಿ 4,58,899 ಅರ್ಜಿಗಳಿಗೆ ಅನುಮೋದನೆ ನೀಡಿದೆ.”

“ಅನುಮೋದಿಸಲು 4,448 ಅರ್ಜಿಗಳು ಬಾಕಿ ಇವೆ. ಅನುಮೋದನೆ ಪಡೆದು ಕೊಂಡಿರುವ ವಿದ್ಯಾರ್ಥಿಗಳಿಗೆ 51.73 ಕೋಟಿ ರು. ಪಾವತಿಸಿದೆ. ಅದೇ ರೀತಿ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,18,161 ಅರ್ಜಿಗಳನ್ನು ಸ್ವೀಕರಿಸಿರುವ ಸರ್ಕಾರವು 2,14,732 ಅರ್ಜಿಗಳಿಗೆ ಅನುಮೋದನೆ ನೀಡಿದೆ. 29.82 ಕೋಟಿ ರು. ಪಾವತಿಸಿದೆ. 3,429 ಅರ್ಜಿಗಳಿಗೆ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ”

“ಹಾಗೆಯೇ ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,31,293 ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 1,33,884 ಸಂಖ್ಯೆಯ ಅರ್ಜಿಗಳನ್ನಷ್ಟೇ ಅನುಮೋದಿಸಿರುವ ಸರ್ಕಾರವು 25.79 ಕೋಟಿ ರು. ಪಾವತಿಸಿದೆ. 97,409 ಅರ್ಜಿಗಳಿಗೆ ಅನುಮೋದನೆ ನೀಡಲು ಬಾಕಿ ಇರಿಸಿಕೊಂಡಿದೆ” ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...