Homeಕರ್ನಾಟಕಶೈಕ್ಷಣಿಕ ವರ್ಷ ಮುಗಿಯುತ್ತಿದ್ದರೂ ದಲಿತ ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್‌ಶಿಪ್ - ಒಪ್ಪಿಕೊಂಡ ಸರ್ಕಾರ

ಶೈಕ್ಷಣಿಕ ವರ್ಷ ಮುಗಿಯುತ್ತಿದ್ದರೂ ದಲಿತ ವಿದ್ಯಾರ್ಥಿಗಳಿಗೆ ಸಿಗದ ಸ್ಕಾಲರ್‌ಶಿಪ್ – ಒಪ್ಪಿಕೊಂಡ ಸರ್ಕಾರ

- Advertisement -
- Advertisement -

2024ನೇ ಸಾಲಿನ ಶೈಕ್ಷಣಿಕ ವರ್ಷ ಕೊನೆಗೊಳ್ಳುತ್ತಿದ್ದರೂ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ ಒಪ್ಪಿಕೊಂಡಿದೆ. ಅದಾಗ್ಯೂ, ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆ ಸಾಮಾಜಿಕ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಶಾಸಕರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಮಹದೇವಪ್ಪ ಅವರು, “2024-25ನೇ ಸಾಲಿನಲ್ಲಿ ಮೆಟ್ರಿ ಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾತಿ ಹಾಗೂ ಪಾವತಿಯು ಪ್ರಗತಿಯಲ್ಲಿದೆ” ಎಂದು ಹೇಳಿದ್ದಾರೆ. ಶೈಕ್ಷಣಿಕ ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಮತ್ತು ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 9,12,801 ಅರ್ಜಿಗಳನ್ನು ಸ್ವೀಕರಿಸಿಸಲಾಗಿದೆ” ಎಂದು ಅವರು ಉತ್ತರಿಸಿದ್ದಾರೆ.

“ಸ್ವೀಕರಿಸಲಾದ ಅರ್ಜಿಗಳಲ್ಲಿ ಇಲ್ಲಿಯವರೆಗೆ 8,07,515 ಅರ್ಜಿಗಳಿಗೆ ಅನುಮೋದನೆ ನೀಡಿದೆ. ಈ ಪೈಕಿ 7,55,125 ವಿದ್ಯಾರ್ಥಿಗಳಿಗೆ ಒಟ್ಟಾರೆ 107.34 ಕೋಟಿ ರೂ. ವಿದ್ಯಾರ್ಥಿ ವೇತನ ಪಾವತಿಯಾಗಿದೆ. ಸ್ವೀಕರಿಸಿರುವ ಅರ್ಜಿಗಳ ಅಂಕಿ ಅಂಶಗಳ ಪ್ರಕಾರ ಇನ್ನೂ 1,05,286 ವಿದ್ಯಾರ್ಥಿಗಳ ಅರ್ಜಿಗಳನ್ನು ಅನುಮೋದಿಸಲು ಬಾಕಿ ಇದೆ” ಎಂದು ಸಚಿವರು ಹೇಳಿದ್ದಾರೆ.

“ಈ ಅರ್ಜಿಗಳಿಗೆ ಅನುಮೋದನೆ ಸಿಕ್ಕ ನಂತರವಷ್ಟೇ ವಿದ್ಯಾರ್ಥಿ ವೇತನವು ಮಂಜೂರಾಗಲಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಒಟ್ಟು 4,63,347 ಅರ್ಜಿಗಳನ್ನು ಸ್ವೀಕರಿಸಿದೆ. ಈ ಪೈಕಿ 4,58,899 ಅರ್ಜಿಗಳಿಗೆ ಅನುಮೋದನೆ ನೀಡಿದೆ.”

“ಅನುಮೋದಿಸಲು 4,448 ಅರ್ಜಿಗಳು ಬಾಕಿ ಇವೆ. ಅನುಮೋದನೆ ಪಡೆದು ಕೊಂಡಿರುವ ವಿದ್ಯಾರ್ಥಿಗಳಿಗೆ 51.73 ಕೋಟಿ ರು. ಪಾವತಿಸಿದೆ. ಅದೇ ರೀತಿ ಕೇಂದ್ರ ಪುರಸ್ಕೃತ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,18,161 ಅರ್ಜಿಗಳನ್ನು ಸ್ವೀಕರಿಸಿರುವ ಸರ್ಕಾರವು 2,14,732 ಅರ್ಜಿಗಳಿಗೆ ಅನುಮೋದನೆ ನೀಡಿದೆ. 29.82 ಕೋಟಿ ರು. ಪಾವತಿಸಿದೆ. 3,429 ಅರ್ಜಿಗಳಿಗೆ ಇನ್ನಷ್ಟೇ ಅನುಮೋದನೆ ಸಿಗಬೇಕಿದೆ”

“ಹಾಗೆಯೇ ಕೇಂದ್ರ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 2,31,293 ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ 1,33,884 ಸಂಖ್ಯೆಯ ಅರ್ಜಿಗಳನ್ನಷ್ಟೇ ಅನುಮೋದಿಸಿರುವ ಸರ್ಕಾರವು 25.79 ಕೋಟಿ ರು. ಪಾವತಿಸಿದೆ. 97,409 ಅರ್ಜಿಗಳಿಗೆ ಅನುಮೋದನೆ ನೀಡಲು ಬಾಕಿ ಇರಿಸಿಕೊಂಡಿದೆ” ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...