Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...