Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...