Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...