Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...