Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...