Homeಮುಖಪುಟಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

ಎಲೆಕ್ಟ್ರಾನಿಕ್‌ ಸಾಧನಗಳ ವಶಕ್ಕೆ ಕರಡು ಮಾರ್ಗಸೂಚಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ವ್ಯಕ್ತಿಗಳು, ಪತ್ರಕರ್ತರು ಅಥವಾ ಸಂಸ್ಥೆಗಳಿಂದ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ ಕರಡು ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಅದನ್ನು ನೀಡುವಂತೆ ಸುಪ್ರೀಂಕೋರ್ಟ್‌ ಹೇಳಿದೆ.

ಈ ಬಗ್ಗೆ ತಜ್ಞರಾದ ರಾಮ್ ರಾಮಸ್ವಾಮಿ, ಮಾಧವ ಪ್ರಸಾದ್, ಸುಜಾತಾ ಪಟೇಲ್, ದೀಪಕ್ ಮಲ್ಘನ್ ಮತ್ತು ಮುಕುಲ್ ಕೇಶವನ್ ಅವರು 2021ರಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಡಿಸಿಕೊಳ್ಳುವ ಬಗ್ಗೆ ಕರಡು ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠ ಈ ಮಾರ್ಗಸೂಚಿಗಳನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಪ್ರಸಾರ ಮಾಡುವಂತೆ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ಅವರಿಗೆ ಸೂಚಿಸಿದೆ.

ನ.7ರಂದು, ಫೌಂಡೇಶನ್ ಫಾರ್ ಮೀಡಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.

ಪತ್ರಕರ್ತರ ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಸರ್ವ ರೀತಿಯ ಅಧಿಕಾರವನ್ನು ತನಿಖಾ ಸಂಸ್ಥೆಗಳಿಗೆ ನೀಡಿರುವುದನ್ನು ಒಪ್ಪಿಕೊಳ್ಳುವುದು ನನಗೆ ತುಂಬಾ ಕಷ್ಟಕರವಾಗಿದೆ. ಇದು ತುಂಬಾ ಅಪಾಯಕಾರಿ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದರು.

ಯುಕೆ ಮತ್ತು ಯುಎಸ್‌ನಂತಹ ದೇಶಗಳಲ್ಲಿ, ಎಲೆಕ್ಟ್ರಾನಿಕ್ ಸಾಧನಗಳ  ಹುಡುಕಾಟ ಮತ್ತು ವಶಕ್ಕೆ ಕಟ್ಟುನಿಟ್ಟಾದ ಷರತ್ತುಗಳಿವೆ. ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಕೊಳ್ಳುವ ಬಗ್ಗೆ ಹೆಚ್ಚುವರಿ ಪ್ರೋಟೋಕಾಲ್‌ಗಳು ಜಾರಿಯಲ್ಲಿವೆ. US ನಲ್ಲಿ ಗೌಪ್ಯತಾ ಸಂರಕ್ಷಣಾ ಕಾಯಿದೆಯಡಿ,  ಪತ್ರಕರ್ತರು, ಕಲಾವಿದರು, ಶಿಕ್ಷಣ ತಜ್ಞರು, ವೈಜ್ಞಾನಿಕ ಸಂಶೋಧಕರಿಂದ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ನಿಬಂಧನೆಗಳಿವೆ.

ಎಲೆಕ್ಟ್ರಾನಿಕ್ ಸಾಧನದಿಂದ ನಿಖರವಾಗಿ ಏನನ್ನು ಹುಡುಕಲಾಗುತ್ತದೆ ಮತ್ತು ಏಕೆ ಎಂಬುವುದನ್ನು ಬರವಣಿಗೆಯಲ್ಲಿ ನೀಡಬೇಕು. ವಶಪಡಿಸಿಕೊಳ್ಳಲು ನ್ಯಾಯಾಂಗ ವಾರಂಟ್‌ ಜಾರಿ ಮಾಡಬೇಕು ಮತ್ತು ತುರ್ತು ವಶಪಡಿಸಿಕೊಳ್ಳಲು ಅದನ್ನು ಆಧಾರವಾಗಿ ತೋರಿಸಬೇಕು. ವಶಪಡಿಸುವ ಮೊದಲು ಈ ಲಿಖಿತ ದಾಖಲೆಯನ್ನು ಸಾಧನದ ಮಾಲೀಕರಿಗೆ ನೀಡಲಾಗುತ್ತದೆ.

ಪೊಲೀಸರು ತಮ್ಮ ಸಾಧನಗಳನ್ನು ಒಪ್ಪಿಸಲು ಯಾರಿಗೂ ಸಮನ್ಸ್‌ ನೀಡುವಂತಿಲ್ಲ. ವಶಪಡಿಸಿಕೊಂಡ ಸಾಧನವನ್ನು ಮಾಲೀಕರ ಸಮ್ಮುಖದಲ್ಲಿ ಸ್ವತಂತ್ರ ಪ್ರಾಧಿಕಾರವು ಮೊದಲು ಪರಿಶೀಲಿಸುತ್ತದೆ. ಬಳಿಕ ಪರಿಶೀಲಿಸಿ ತಕ್ಷಣವೇ ಸಾಧನಗಳನ್ನು ಹಿಂತಿರುಗಿಸಲಾಗುತ್ತದೆ. ತನಿಖೆಗೆ ನೇರವಾಗಿ ಸಂಬಂಧಿಸಿದ ವಸ್ತುಗಳನ್ನು ಮಾತ್ರ ತೆಗೆದುಕೊಂಡು ಹೋಗಬೇಕು. ಅದರಲ್ಲಿ ಮೂರು ಪ್ರತಿಗಳನ್ನು ಮಾಡಬೇಕು. ಒಂದನ್ನು ಮಾಲೀಕರಿಗೆ, ಒಂದನ್ನು ಸ್ವತಂತ್ರ ಪ್ರಾಧಿಕಾರಕ್ಕೆ ಮತ್ತು ಮೂರನೆಯದನ್ನು ತನಿಖಾ ಸಂಸ್ಥೆ ತೆಗೆದುಕೊಳ್ಳಬೇಕು.

ಅಪರೂಪದ ಸಂದರ್ಭದಲ್ಲಿ ತನಿಖಾಧಿಖಾರಿಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು. ಸಾಧನದ ವಾಪಸಾತಿಯು ವಶಪಡಿಸಿಕೊಂಡ 30 ದಿನಗಳಲ್ಲಿ ಇರಬೇಕು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಉಲ್ಲೇಖಿಸಿದೆ.

ಈ ಮಾರ್ಗಸೂಚಿಗಳನ್ನು ಅರ್ಜಿದಾರರು ಮಧ್ಯಂತರ ಕ್ರಮವಾಗಿ ಪ್ರಸ್ತಾಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳಿಂದ ಅಥವಾ ಶಾಸನದ ಮೂಲಕ  ಅದನ್ನು ಬದಲಾಯಿಸಬಹುದಾಗಿದೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...