Homeಅಂಕಣಗಳುಗಾಂಧಿ ಕಥನಕ್ಕೂ ಪ್ರಶಸ್ತಿ

ಗಾಂಧಿ ಕಥನಕ್ಕೂ ಪ್ರಶಸ್ತಿ

- Advertisement -
- Advertisement -

ಗಾಂಧೀಜಿಯನ್ನು ಕೊಂದವರನ್ನು ವೇದಿಕೆಯ ಮೇಲೆ ಸಮರ್ಥಿಸಿಕೊಳ್ಳುವವರನ್ನು ಮಟ್ಟಹಾಕದ, ಅಂತಹವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದಿರುವವರು ದೇಶ ಆಳುತ್ತಿರುವ ಸಮಯದಲ್ಲಿ ಗಾಂಧೀಜಿ ಕುರಿತ ಪುಸ್ತಕ ಬರೆದವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೊಟ್ಟಿರುವುದು ಶ್ಯಾನೆ ಸಂಶಯಗಳಿಗೆ ಎಡೆಮಾಡಿಕೊಟ್ಟಿರುವುದಲ್ಲದೆ, ಸ್ವತಹ ಬರೆದವರಿಗೇ ಅಚ್ಚರಿ ಮೂಡಿಸಿದೆಯಲ್ಲಾ! ಯಾಕೆಂದರೆ, ಈ ಬಿಜೆಪಿ ಸರಕಾರ ಏನೇ ಮಾಡಿದರು ಅಲ್ಲೊಂದು ಸಂಚು ಅಂತರ್ಗತವಾಗಿ ಕೆಲಸ ಮಾಡಿರುತ್ತದೆ. ಇರಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಒಂದು ಸ್ವತಂತ್ರ ಸಂಸ್ಥೆ ಎಂಬ ಸಮರ್ಥನೆ ಇದ್ದೇ ಇರುತ್ತದೆ. ಆದರೆ ಇಂದು ದೇಶದ ಸ್ವತಂತ್ರ ಸಂಸ್ಥೆಗಳು ಹಿಡಿದಿರುವ ದಾರಿ ನೋಡಿದರೆ ಸರ್ಕಾರದ ಕೈವಾಡಗಳ ಬಗ್ಗೆ ಅನುಮಾನ ಮೂಡದೇ ಇರದು.

ಇಂತಹ ಅನುಮಾನದಲ್ಲಿಯೇ ಯೋಚಿಸುವುದಾದರೆ ಈ ಸರ್ಕಾರಕ್ಕೆ ಮುಂದೆ ಗಾಂಧೀಜಿಯೂ ಬೇಕಾಗಬಹುದು. (ಸದ್ಯಕ್ಕೆ ವಿದೇಶಗಳಲ್ಲಿ ಹಾರ ಹಾಕುವುದಕ್ಕೆ ಮಾತ್ರ ಸೀಮಿತವಾಗಿದೆ ಗಾಂಧಿ ಪ್ರೇಮ!). ಎಲ್ಲಕ್ಕಿಂತ ಮುಖ್ಯವಾಗಿ ಗಾಂಧಿ ಕಥನ ಬರೆದವರ ಈವರೆಗಿನ ಬದುಕು ಮತ್ತು ಬರವಣಿಗೆಯನ್ನೂ ಪ್ರಶಸ್ತಿ ಕೊಟ್ಟವರು ಪರಿಗಣಿಸಿರಬಹುದು. ಅದರಲ್ಲಿ ಪ್ರಧಾನವಾಗಿ, ಬೋಫೋರ್ಸು ಹಗರಣದಷ್ಟೇ ಗಂಭೀರವಾದ ರಫೇಲ್ ಹಗರಣದ ಬಗ್ಗೆ ಗಾಂಧಿ ಕಥನದ ಲೇಖಕರು ಬರೆಯುತ್ತಾ ಈ ರಫೇಲ್ ಒಪ್ಪಂದವನ್ನು ಪ್ರಧಾನಿಯವರು ತ್ವರಿತವಾಗಿ ಮುಗಿಸಿದ್ದಾರೆ, ಇದರಲ್ಲಿ ಅವರ ಸ್ವಂತ ಹಿತಾಸಕ್ತಿ ಏನೂ ಇಲ್ಲ ಎಂದು ಬರೆದಾಗ, ಕ್ಯಾರವಾನ್ ಪತ್ರಿಕೆ ಮೂವತ್ತು ಪೇಜಿನಲ್ಲಿ ರಫೇಲ್ ಹಗರಣದ ವರದಿ ಪ್ರಕಟಿಸಿತ್ತು. ಮುಂದೆ ಇದೇ ಲೇಖಕರು ಬದಲಾಗುತ್ತಿರುವ ಆರೆಸ್ಸೆಸ್ ಎಂದು ವಕಾಲತ್ತು ವಹಿಸಿದರು. ಅದಾದ ಮೇಲೆ ತಮ್ಮ ಮನೆಯ ಮುಂದೆಯೇ ಮಹೇಂದ್ರ ಟಿಕಾಯತ್ ರೈತಚಳವಳಿ ಸಭೆ ಮಾಡಿದಾಗ, ಲೇಖಕರು ತಮ್ಮ ಅನಿಸಿಕೆ ಬಿಟ್ಟು, ರೈತನಾಯಕರಿಗೇ ಈ ಬಗ್ಗೆ ಬರೆಯಿರಿ ಎಂದು ಅಹ್ವಾನ ಕೊಟ್ಟರು. ಸದ್ಯದ ಎಡ ಬಲದ ಚರ್ಚೆಯಲ್ಲಿ ಗಾಂಧಿ ಕಥನಕಾರರು ಬಲಗಡೆಯಿದ್ದಾರೆಂದೂ, ಎಡ ಮತ್ತು ಬಲದ ನಡುವೆ ಹೃದಯವಿದ್ದು ಅದು ಎಡಭಾಗದಲ್ಲಿದೆ ಎಂದೂ, ಗಾಂಧಿ ಕಥನಕಾರರನ್ನು ಕಂಡರಾಗದವರ ಹೇಳಿಕೆ ಕೊಡುತ್ತಿದ್ದಾರೆಲ್ಲಾ ಥೂತ್ತೇರಿ.

ಗಾಂಧಿ ಎಂಬ ಮುಕುಟಮಣಿಯನ್ನು ಸ್ಪರ್ಶಿಸಿದವರಿಗೆಲ್ಲಾ ಒಳ್ಳೆಯದಾಗಿದೆ ಮತ್ತು ಪ್ರಶಸ್ತಿಗಳೂ ಬಂದಿವೆ. ಪ್ರಶಸ್ತಿ ಎಂದ ಮೇಲೆ ಅಲ್ಲೊಂದಿಷ್ಟು ಕಾಸು ಇದ್ದೇ ಇರುತ್ತದೆ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ಗಾಂಧಿ ಕಾರಣವಾಗಿ ಈ ದೇಶದಲ್ಲಿ ಶತಮಾನದಿಂದಲೂ ಅಸಂಖ್ಯಾತ ಜನರು ಪಾವನವಾಗಿದ್ದಾರೆ.
ಗಾಂಧೀಜಿಯವರ ನಂತರ ನಮ್ಮ ಸಮಾಜವಾದಿಗಳು ಅವರ ಮುಂದುವರಿಕೆಯಾಗಿ
ಗೋಚರಿಸಬೇಕಿತ್ತು. ಆದರೆ ನಮ್ಮ ಸಮಾಜವಾದಿಗಳು ಹೋರಾಡಿದ್ದು ತಮ್ಮಗಳ ವಿರುದ್ಧವೇ. ಹೀಗೆ ಎಲ್ಲರನ್ನ ಕಳೆದುಕೊಂಡು ಏಕಾಂತಗೊಂಡಿರುವ ಸಮಾಜವಾದಿಗಳಿಗೆ ಗಾಂಧಿಯೇ ದಿಕ್ಕಾಗಿದ್ದಾರೆ. ಗಾಂಧಿಯವರ ಕಥನ ರೂಪುಗೊಂಡು ಹೊಸ ಸಂವೇದನೆಯ ಗಾಳಿ ಬೀಸಿದ್ದರೂ, ಲೇಖಕರ ಪೂರ್ವಗ್ರಹಗಳು ಹಾಗೂ ಹಠಮಾರಿತನಗಳೇನಾದರೂ ಕಥನದಲ್ಲಿ ಸೂಕ್ಷ್ಮವಾಗಿ ಬೆರೆತು ಕೆಲಸ ಮಾಡಿವೆಯೇ ಎಂಬುದನ್ನು ಕಲಿತ ಸಮಾಜವಾದಿಗಳು ಪತ್ತೆಹಚ್ಚಿ ಹೇಳಬೇಕೆಂದು ಗಾಂಧಿವಾದಿಗಳ ಗೊಣಗಾಟವಾಗಿದೆಯಂತಲ್ಲಾ ಥೂತ್ತೆರಿ.

ನಮ್ಮ ಕರ್ನಾಟಕದಲ್ಲಿ ವಿರೋಧಪಕ್ಷಕ್ಕೊಂದು ವಿರೋಧ ಪಕ್ಷವಿದೆಯಂತಲ್ಲಾ! ರಾಷ್ಟ್ರಮಟ್ಟದ ವಿರೋಧಿ ನಾಯಕರೆಲ್ಲಾ ಬಂದು ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಯಾಗಿಸಿ ಆಶೀರ್‍ವಾದ ಮಾಡಿ ಹೋದರು. ಇದೊಂತರ ಶ್ರೀಮಂತರ ಮದುವೆಗೆ ದೇಶದ ಗಣ್ಯರೆಲ್ಲಾ ಬಂದು ಭಾಗವಹಿಸಿದಂತಹ ಪ್ರಸಂಗ. ವರ ಮತ್ತು ವಧುವಿಗೆ ತಾಳೆಯಾಗದೆ, ತಾಜ್ ವೆಸ್ಟ್‌ಎಂಡ್ ಹೋಟೆಲಿನಲ್ಲಿ ಶುರುವಾದ ಸಂಸಾರ ಬಹಳದಿನ ಬಾಳಿಕೆ ಬರಲಿಲ್ಲ. ಹಾಡುಹಗಲೇ ಡೈವರ್ಸು ನಡೆದೇಹೋಯ್ತು. ಇದರ ಸತ್ಯಾಸತ್ಯತೆ ಗ್ರಹಿಸಲಾರದವರೆ ಅಂದಿನಿಂದಲೂ ವರಲುತ್ತ ಡೈವರ್ಸಿಗೆ ಕಾರಣರಾದವರನ್ನು ಹಾದಿಬೀದಿಯಲ್ಲಿ ಬೈಯುತ್ತ ಕಿರುಚುತ್ತಿರಬೇಕಾದರೆ, ಅವರ ಮಾತುಗಳೆಲ್ಲಾ ವಿರೋಧಪಕ್ಷಕ್ಕೊಂದು ವಿರೋಧ ಪಕ್ಷವನ್ನೇ ರೂಪಿಸುತ್ತಿದೆಯಂತಲ್ಲಾ. ಉದಾಹರಣೆಗೆ ರಾಜ್ಯದ ಕಂಟ್ರ್ಯಾಕ್ಟರುಗಳು ಈ ಆಳುವ ರಾಜಕಾರಣಗಳಿಗೆ ನಲವತ್ತು ಪರಸೆಂಟ್ ಕಮಿಶನ್ ಕೊಡಲಾಗುವುದಿಲ್ಲ ಎಂದು ಪತ್ರ ಬರೆದರು. ಕೂಡಲೇ ಕುಮಾರಣ್ಣ ಸದರಿ ಪರಸೆಂಟೇಜ್ ಸಿದ್ದರಾಮಯ್ಯನವರ ಕಾಲದಲ್ಲಿರಲಿಲ್ಲ ಎಂದು ಅವರು ಎದೆ ಮುಟ್ಟಿ ಹೇಳಲಿ ಎಂದು ಸವಾಲೆಸೆದರು. ಹಾಗಾದರೆ ಕುಮಾರಣ್ಣ ತಾಜ್ ವೆಸ್ಟ್ ಹೋಟೆಲಿನಲ್ಲಿದ್ದಾಗ ಪರಸಂಟೇಜು ಸ್ಟಾಪಾಗಿತ್ತೇ ಎಂದು ರೇವಣ್ಣಾಭಿಮಾನಿಗಳ ಪ್ರಶ್ನೆಯಾಗಿದೆಯಂತಲ್ಲಾ? ಪರಸೆಂಟೇಜು ಕೊಟ್ಟುಕೊಟ್ಟು ಸುಸ್ತಾಗಿರುವ ಕಂಟ್ರ್ಯಾಕ್ಟರ್ ಪರವಾಗಿ ನಿಂತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಿದ್ದ ಕುಮಾರಣ್ಣ ಉಲ್ಟಾಹೊಡೆದು ವಿರೋಧಪಕ್ಷ ಕಾಂಗ್ರೆಸ್‌ಗೆ ಸರಿಯಾದ ವಿರೋಧಪಕ್ಷವಾಗಿ ಕೆಲಸ ಮಾಡುತ್ತಿದ್ದಾರಂತಲ್ಲಾ ಥೂತ್ತೇರಿ.

ದೀರ್ಘಕಾಲದಿಂದಲೂ ಎಲ್‌ಕೆಜಿಯ ಮಕ್ಕಳಿಗೂ ಹಿಂದಿ ಕಲಿಸುತ್ತಿರುವ ಅಪಾಯದ ಬಗ್ಗೆ ಕನ್ನಡಿಗರ ಒಟ್ಟಾರೆಯಾಗಿ ಗಂಭೀರ ಅರಿವು ಮೂಡಿಲ್ಲ. ತಮ್ಮ ಮಾತೃಭಾಷೆಯನ್ನ ಕೊಂದು ಹಿಂದಿ ಉಳಿಸಲು ಹೋರಾಡುತ್ತಿರುವ ದೃಶ್ಯ ಆತ್ಮಹತ್ಯಾತ್ಮಕವಾಗಿದೆಯೆಲ್ಲಾ ಎಂಬುದು ಕೂಡ. ಇನ್ನ ಬಿಜೆಪಿ ಸರಕಾರ ಬಂದ ಮೇಲೆ ಅದರ ಎಂದಿನ ಸಂಚಿನ ಫಲವಾಗಿ ನಮ್ಮ ರೈಲುಗಳ ಮೈಮೇಲಿಂದ ಕನ್ನಡ ಅಳಿಸಿಹೋಯ್ತು, ಮೈಲಿಗಲ್ಲಿನಿಂದಲೂ ಕನ್ನಡ ಹೋಗಿದೆ. ಗ್ರಾಮಾಂತರ ಪ್ರದೇಶದ ಹೋಟೆಲುಗಳ ಮೆನು ಕಾರ್ಡಿನಿಂದ ಕೂಡ ಕನ್ನಡ ಮರೆಯಾಗಿದೆ. ನಿಮ್ಮ ಯಾವುದೇ ಅಂಗಡಿ ಮುಂಗಟ್ಟು ಹೋಟೆಲು ಇತ್ಯಾದಿ ಕಟ್ಟಡಗಳ ಮೇಲೆ ಮಾತೃಭಾಷೆ ಪ್ರಧಾನವಾಗಿದ್ದು ಉಳಿದ ಭಾಷೆ ಸಣ್ಣದಾಗಿರಲಿ ಎಂಬ ಆದೇಶಕ್ಕೆ ಕೂಡ ಮೂರು ಕಾಸಿನ ಬೆಲೆಯಿಲ್ಲದಂತಾಗಿದೆಯೆಲ್ಲಾ ಥೂತ್ತೆರಿ.


ಇದನ್ನೂ ಓದಿ: ಡಿ.ಎಸ್. ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...