Homeಮುಖಪುಟಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

- Advertisement -
- Advertisement -

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ ರಾಜಸ್ಥಾನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಆರೋಪಿಸಿದ್ದಾರೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಳವೀಯ ಅವರಿಗೆ ಸಂಬಂಧಿಸಿದ ಮೂರು ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದ ಮತ್ತು ರಾಜಸ್ಥಾನದ ಬುಡಕಟ್ಟು ಕ್ಷೇತ್ರವಾದ ಬನ್ಸ್ವಾರಾದ ಮಾಜಿ ಸಂಸದರಾಗಿರುವ ಮಾಳವೀಯ, ಜೈಪುರದ ಕಾನ್ಸಿಟ್ಯೂಷನ್ ಕ್ಲಬ್‌ನಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ, ಪ್ರಧಾನ ಕಾರ್ಯದರ್ಶಿ ಸುಖಜಿಂದರ್ ಸಿಂಗ್ ರಾಂಧವಾ ಮತ್ತು ವಿರೋಧ ಪಕ್ಷದ ನಾಯಕ ಟಿಕಾರಾಮ್ ಜುಲ್ಲಿ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದರು.

ಎಸಿಬಿ ದಾಳಿಯ ಬಗ್ಗೆ ಪ್ರತಿಕ್ರಿಯಿಸಲು ಮಾಳವೀಯ ನಿರಾಕರಿಸಿದ್ದಾರೆ. ಆದರೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಇದನ್ನು ದೃಢಪಡಿಸಿದ್ದಾರೆ. ಇದು ‘ಪ್ರಜಾಪ್ರಭುತ್ವಕ್ಕೆ ಅವಮಾನ’ ಮತ್ತು ‘ರಾಜಕೀಯ ಸೇಡಿಗಾಗಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಒಂದು ಉದಾಹರಣೆ’ ಎಂದು ಹೇಳಿದ್ದಾರೆ.

“ಮಾಳವೀಯ ಅವರು ಬಿಜೆಪಿಯಲ್ಲಿ ಸಮಸ್ಯೆ ಅನುಭವಿಸುತ್ತಿದ್ದರು. ಅವರು ತಮ್ಮ ಮಾತೃ ಪಕ್ಷಕ್ಕೆ (ಕಾಂಗ್ರೆಸ್) ಮರಳಲು ಬಯಸಿದ್ದರು. ಇಲ್ಲಿ ಅವರಿಗೆ ಗೌರವ ಸಿಗುತ್ತದೆ. ಬಿಜೆಪಿಯಲ್ಲಿ ವಂಚನೆ, ಸುಳ್ಳು ಮತ್ತು ಅಪ್ರಾಮಾಣಿಕತೆಯನ್ನು ಬಿಟ್ರೆ ಬೇರೇನೂ ನಡೆಯುತ್ತಿಲ್ಲ” ಎಂದಿದ್ದಾರೆ.

ದಾಳಿಯ ಕುರಿತು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮಾಡಿದ ಕರೆಗಳು ಮತ್ತು ಸಂದೇಶಗಳಿಗೆ ಉತ್ತರ ಸಿಕ್ಕಿಲ್ಲ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ತಮ್ಮ ನಿರ್ಧಾರ ಬದಲಾಯಿಸುವ (ಕಾಂಗ್ರೆಸ್‌ಗೆ ಮರಳುವ) ಇಂಗಿತ ವ್ಯಕ್ತಪಡಿಸಿದ್ದ ಮಾಳವೀಯ, ‘ಬಿಜೆಪಿ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ಅಸಮರ್ಥತೆ’ ಇದಕ್ಕೆ ಕಾರಣ ಎಂದು ಉಲ್ಲೇಖಿಸಿದ್ದರು. “ಬಿಜೆಪಿ ಸರ್ಕಾರದಲ್ಲಿ ಬಡವರ ಮಾತು ಕೇಳುವವರು ಯಾರೂ ಇಲ್ಲ. ನರೇಗಾ ಪಾವತಿಗಳು ತಿಂಗಳುಗಳಿಂದ ಬಾಕಿ ಉಳಿದಿವೆ ಮತ್ತು ರೈತರಿಗೆ ರಸಗೊಬ್ಬರಗಳು ಸಿಗುತ್ತಿಲ್ಲ. ನಾನು ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರಿಗೆ ಹಲವಾರು ಬಾರಿ ಪತ್ರ ಬರೆದಿದ್ದೇನೆ, ಆದರೆ ಯಾವುದೇ ಪರಿಹಾರ ದೊರೆತಿಲ್ಲ. ಆದ್ದರಿಂದ, ಬುಡಕಟ್ಟು ಪ್ರದೇಶಗಳಲ್ಲಿ ಕಾಂಗ್ರೆಸ್ ಮಾತ್ರ ಸಾರ್ವಜನಿಕರನ್ನು ಮೇಲೆತ್ತಬಲ್ಲದು ಎಂದು ನಾನು ಒಪ್ಪಿಕೊಂಡಿದ್ದೇನೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಮಾಳವೀಯ ಅವರ ಮರಳುವಿಕೆಯ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ನಾವು ಶಿಸ್ತು ಸಮಿತಿಗೆ ಬಿಟ್ಟಿದ್ದೇವೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದೋತಾಸ್ರಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...