Homeಅಂತರಾಷ್ಟ್ರೀಯಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

- Advertisement -
- Advertisement -

ಜಾಗತಿಕ ಕನ್ಸಲ್ಟೆನ್ಸಿ ದೈತ್ಯ ಆಕ್ಸೆಂಚರ್ ಕಳೆದ ಮೂರು ತಿಂಗಳಲ್ಲಿ ಪ್ರಪಂಚದಾದ್ಯಂತ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.

ಕೃತಕ ಬುದ್ದಿಮತ್ತೆಯ (ಎಐ) ತ್ವರಿತ ಅಳವಡಿಕೆ ಮತ್ತು ಕಾರ್ಪೊರೇಟ್ ಬೇಡಿಕೆ ನಿಧಾನವಾಗುತ್ತಿರುವುದು ವಜಾಗೊಳಿಸುವಿಕೆಗೆ ಕಾರಣ ಎಂದು ಕಂಪನಿ ಬಹಿರಂಗಪಡಿಸಿದೆ.

ಕಂಪನಿಯು 865 ಮಿಲಿಯನ್ ಡಾಲರ್‌ ಮೊತ್ತದ ಮರುರಚನೆ ಕಾರ್ಯಕ್ರಮದ ಭಾಗವಾಗಿ ಉದ್ಯೋಗ ಕಡಿತ ಮಾಡಲಾಗಿದೆ ಎಂದು ದೃಢಪಡಿಸಿದೆ. ಇದರ ಜೊತೆಗೆ, ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಕಂಪನಿಯು ಕೆಲವು ಉದ್ಯೋಗಿಗಳನ್ನು ತ್ವರಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಿದೆ. ಏಕೆಂದರೆ, ನಮಗೆ ಅವರನ್ನು ಮರುಕೌಶಲ್ಯಗೊಳಿಸುವ ಮೂಲಕ ಕಂಪನಿಗೆ ಬೇಕಾದ ಹೊಸ ಕೌಶಲ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಕಂಪನಿಯು ಉದ್ಯೋಗಿಗಳನ್ನು ಕೃತಕ ಬುದ್ಧಿಮತ್ತೆ ಆಧಾರಿತ ಸೇವೆಗಳಿಗೆ ಕ್ಲೈಂಟ್‌ಗಳ ಬೇಡಿಕೆಗೆ ತಕ್ಕಂತೆ ಹೊಂದಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪ್ರಕ್ರಿಯೆಯಲ್ಲಿ, ಕೆಲವು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡಬೇಕಾಗಿದೆ. ಏಕೆಂದರೆ, ಅವರನ್ನು ಉಳಿಸಿಕೊಳ್ಳಲು ನಮಗೆ ಸಾಧ್ಯವಿಲ್ಲ ಎಂದು ಆಕ್ಸೆಂಚರ್‌ನ ಸಿಇಒ ಜೂಲಿ ಸ್ವೀಟ್ ಹೇಳಿದ್ದಾರೆ.

ಆಗಸ್ಟ್ ತಿಂಗಳ ಅಂತ್ಯದಲ್ಲಿ, ಆಕ್ಸೆಂಚರ್‌ನ ಜಾಗತಿಕ ಉದ್ಯೋಗಿಗಳ ಸಂಖ್ಯೆ 7,79,000 ಆಗಿತ್ತು, ಇದು ಮೂರು ತಿಂಗಳ ಹಿಂದೆ ಇದ್ದ 7,91,000 ರಿಂದ ಕಡಿಮೆಯಾಗಿದೆ. ಆಕ್ಸೆಂಚರ್‌ನಲ್ಲಿ ಉದ್ಯೋಗ ಕಡಿತದ ಈ ಸುತ್ತು ಈ ವರ್ಷದ ಆರಂಭದಲ್ಲಿ ಪ್ರಾರಂಭವಾಗಿದ್ದು, ಇದು 2025ರ ನವೆಂಬರ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಕಂಪನಿಯ ಮರುರಚನೆಯು ಮುಖ್ಯವಾಗಿ ವಜಾಗೊಳಿಸುವಿಕೆಯ ವೆಚ್ಚಗಳನ್ನು ಒಳಗೊಂಡಿದ್ದು, ಇದರಿಂದ ಕಂಪನಿಗೆ 1 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.

ಉದ್ಯೋಗ ಕಡಿತದ ಜೊತೆಗೆ, ಆಕ್ಸೆಂಚರ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಕೌಶಲ್ಯ ವೃದ್ಧಿಯ ತರಬೇತಿಯಲ್ಲಿ ಹೂಡಿಕೆ ಮಾಡುತ್ತಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಏಜೆಂಟಿಕ್ ಕೃತಕ ಬುದ್ಧಿಮತ್ತೆ (ಏಜೆಂಟಿಕ್ ಎಐ) ಕುರಿತು ತರಬೇತಿ ನೀಡಲು ಪ್ರಾರಂಭಿಸಿದೆ. ಇದು ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸಲು ವಿನ್ಯಾಸಗೊಳಿಸಲಾದ ಎಐ ಉಪಕರಣಗಳ ಹೊಸ ತರಂಗವಾಗಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ತರಬೇತಿಯು ಕ್ಲೈಂಟ್‌ಗಳ ನಿರೀಕ್ಷೆಗಳನ್ನು ಪೂರೈಸಲು ಮುಖ್ಯವಾಗಿದೆ ಎಂದು ಹೇಳಿದ್ದಾರೆ, ಏಕೆಂದರೆ ವಿಶ್ವದಾದ್ಯಂತದ ವ್ಯವಹಾರಗಳು ಎಐನೊಂದಿಗೆ ತಮ್ಮ ಕಾರ್ಯಾಚರಣೆಗಳನ್ನು ಮರುಆವಿಷ್ಕಾರ ಮಾಡಲು ಪ್ರಯತ್ನಿಸುತ್ತಿದೆ.

ಉದ್ಯೋಗ ಕಡಿತದ ಹೊರತಾಗಿಯೂ, ಆಕ್ಸೆಂಚರ್ ಕಂಪನಿಯು 2025ನೇ ಆರ್ಥಿಕ ವರ್ಷದ ಜೂನ್-ಆಗಸ್ಟ್ ತ್ರೈಮಾಸಿಕದಲ್ಲಿ ವಾರ್ಷಿಕವಾಗಿ 7% ಆದಾಯ ವೃದ್ಧಿಯನ್ನು ವರದಿ ಮಾಡಿದೆ. ಒಟ್ಟು 17.6 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದ್ದು, ಇದು ನಿರೀಕ್ಷೆಗಳನ್ನು ಮೀರಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ಫಲಿತಾಂಶಗಳು ಆಕ್ಸೆಂಚರ್‌ ತನ್ನ “ಕ್ಲೈಂಟ್‌ಗಳಿಗೆ ಎಐನೊಂದಿಗೆ ಮರುಆವಿಷ್ಕಾರ ಮಾಡಲು ಮತ್ತು ಮುನ್ನಡೆಸಲು ಸಹಾಯ ಮಾಡುವ ವಿಶಿಷ್ಟ ಸಾಮರ್ಥ್ಯವನ್ನು” ಪ್ರದರ್ಶಿಸುತ್ತವೆ ಎಂದು ಹೇಳಿದ್ದಾರೆ.

ಆಮದು ಔಷಧಗಳಿಗೆ ಭಾರೀ ಹೊರೆ: ಶೇ.100ರಷ್ಟು ತೆರಿಗೆ ವಿಧಿಸಲು ಟ್ರಂಪ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...