Homeಅಂತರಾಷ್ಟ್ರೀಯಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

- Advertisement -
- Advertisement -

ಜಾಗತಿಕ ಕನ್ಸಲ್ಟೆನ್ಸಿ ದೈತ್ಯ ಆಕ್ಸೆಂಚರ್ ಕಳೆದ ಮೂರು ತಿಂಗಳಲ್ಲಿ ಪ್ರಪಂಚದಾದ್ಯಂತ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.

ಕೃತಕ ಬುದ್ದಿಮತ್ತೆಯ (ಎಐ) ತ್ವರಿತ ಅಳವಡಿಕೆ ಮತ್ತು ಕಾರ್ಪೊರೇಟ್ ಬೇಡಿಕೆ ನಿಧಾನವಾಗುತ್ತಿರುವುದು ವಜಾಗೊಳಿಸುವಿಕೆಗೆ ಕಾರಣ ಎಂದು ಕಂಪನಿ ಬಹಿರಂಗಪಡಿಸಿದೆ.

ಕಂಪನಿಯು 865 ಮಿಲಿಯನ್ ಡಾಲರ್‌ ಮೊತ್ತದ ಮರುರಚನೆ ಕಾರ್ಯಕ್ರಮದ ಭಾಗವಾಗಿ ಉದ್ಯೋಗ ಕಡಿತ ಮಾಡಲಾಗಿದೆ ಎಂದು ದೃಢಪಡಿಸಿದೆ. ಇದರ ಜೊತೆಗೆ, ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಕಂಪನಿಯು ಕೆಲವು ಉದ್ಯೋಗಿಗಳನ್ನು ತ್ವರಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಿದೆ. ಏಕೆಂದರೆ, ನಮಗೆ ಅವರನ್ನು ಮರುಕೌಶಲ್ಯಗೊಳಿಸುವ ಮೂಲಕ ಕಂಪನಿಗೆ ಬೇಕಾದ ಹೊಸ ಕೌಶಲ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಕಂಪನಿಯು ಉದ್ಯೋಗಿಗಳನ್ನು ಕೃತಕ ಬುದ್ಧಿಮತ್ತೆ ಆಧಾರಿತ ಸೇವೆಗಳಿಗೆ ಕ್ಲೈಂಟ್‌ಗಳ ಬೇಡಿಕೆಗೆ ತಕ್ಕಂತೆ ಹೊಂದಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪ್ರಕ್ರಿಯೆಯಲ್ಲಿ, ಕೆಲವು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡಬೇಕಾಗಿದೆ. ಏಕೆಂದರೆ, ಅವರನ್ನು ಉಳಿಸಿಕೊಳ್ಳಲು ನಮಗೆ ಸಾಧ್ಯವಿಲ್ಲ ಎಂದು ಆಕ್ಸೆಂಚರ್‌ನ ಸಿಇಒ ಜೂಲಿ ಸ್ವೀಟ್ ಹೇಳಿದ್ದಾರೆ.

ಆಗಸ್ಟ್ ತಿಂಗಳ ಅಂತ್ಯದಲ್ಲಿ, ಆಕ್ಸೆಂಚರ್‌ನ ಜಾಗತಿಕ ಉದ್ಯೋಗಿಗಳ ಸಂಖ್ಯೆ 7,79,000 ಆಗಿತ್ತು, ಇದು ಮೂರು ತಿಂಗಳ ಹಿಂದೆ ಇದ್ದ 7,91,000 ರಿಂದ ಕಡಿಮೆಯಾಗಿದೆ. ಆಕ್ಸೆಂಚರ್‌ನಲ್ಲಿ ಉದ್ಯೋಗ ಕಡಿತದ ಈ ಸುತ್ತು ಈ ವರ್ಷದ ಆರಂಭದಲ್ಲಿ ಪ್ರಾರಂಭವಾಗಿದ್ದು, ಇದು 2025ರ ನವೆಂಬರ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಕಂಪನಿಯ ಮರುರಚನೆಯು ಮುಖ್ಯವಾಗಿ ವಜಾಗೊಳಿಸುವಿಕೆಯ ವೆಚ್ಚಗಳನ್ನು ಒಳಗೊಂಡಿದ್ದು, ಇದರಿಂದ ಕಂಪನಿಗೆ 1 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.

ಉದ್ಯೋಗ ಕಡಿತದ ಜೊತೆಗೆ, ಆಕ್ಸೆಂಚರ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಕೌಶಲ್ಯ ವೃದ್ಧಿಯ ತರಬೇತಿಯಲ್ಲಿ ಹೂಡಿಕೆ ಮಾಡುತ್ತಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಏಜೆಂಟಿಕ್ ಕೃತಕ ಬುದ್ಧಿಮತ್ತೆ (ಏಜೆಂಟಿಕ್ ಎಐ) ಕುರಿತು ತರಬೇತಿ ನೀಡಲು ಪ್ರಾರಂಭಿಸಿದೆ. ಇದು ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸಲು ವಿನ್ಯಾಸಗೊಳಿಸಲಾದ ಎಐ ಉಪಕರಣಗಳ ಹೊಸ ತರಂಗವಾಗಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ತರಬೇತಿಯು ಕ್ಲೈಂಟ್‌ಗಳ ನಿರೀಕ್ಷೆಗಳನ್ನು ಪೂರೈಸಲು ಮುಖ್ಯವಾಗಿದೆ ಎಂದು ಹೇಳಿದ್ದಾರೆ, ಏಕೆಂದರೆ ವಿಶ್ವದಾದ್ಯಂತದ ವ್ಯವಹಾರಗಳು ಎಐನೊಂದಿಗೆ ತಮ್ಮ ಕಾರ್ಯಾಚರಣೆಗಳನ್ನು ಮರುಆವಿಷ್ಕಾರ ಮಾಡಲು ಪ್ರಯತ್ನಿಸುತ್ತಿದೆ.

ಉದ್ಯೋಗ ಕಡಿತದ ಹೊರತಾಗಿಯೂ, ಆಕ್ಸೆಂಚರ್ ಕಂಪನಿಯು 2025ನೇ ಆರ್ಥಿಕ ವರ್ಷದ ಜೂನ್-ಆಗಸ್ಟ್ ತ್ರೈಮಾಸಿಕದಲ್ಲಿ ವಾರ್ಷಿಕವಾಗಿ 7% ಆದಾಯ ವೃದ್ಧಿಯನ್ನು ವರದಿ ಮಾಡಿದೆ. ಒಟ್ಟು 17.6 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದ್ದು, ಇದು ನಿರೀಕ್ಷೆಗಳನ್ನು ಮೀರಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ಫಲಿತಾಂಶಗಳು ಆಕ್ಸೆಂಚರ್‌ ತನ್ನ “ಕ್ಲೈಂಟ್‌ಗಳಿಗೆ ಎಐನೊಂದಿಗೆ ಮರುಆವಿಷ್ಕಾರ ಮಾಡಲು ಮತ್ತು ಮುನ್ನಡೆಸಲು ಸಹಾಯ ಮಾಡುವ ವಿಶಿಷ್ಟ ಸಾಮರ್ಥ್ಯವನ್ನು” ಪ್ರದರ್ಶಿಸುತ್ತವೆ ಎಂದು ಹೇಳಿದ್ದಾರೆ.

ಆಮದು ಔಷಧಗಳಿಗೆ ಭಾರೀ ಹೊರೆ: ಶೇ.100ರಷ್ಟು ತೆರಿಗೆ ವಿಧಿಸಲು ಟ್ರಂಪ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...