Homeಅಂತರಾಷ್ಟ್ರೀಯಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

- Advertisement -
- Advertisement -

ಜಾಗತಿಕ ಕನ್ಸಲ್ಟೆನ್ಸಿ ದೈತ್ಯ ಆಕ್ಸೆಂಚರ್ ಕಳೆದ ಮೂರು ತಿಂಗಳಲ್ಲಿ ಪ್ರಪಂಚದಾದ್ಯಂತ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ವರದಿಯಾಗಿದೆ.

ಕೃತಕ ಬುದ್ದಿಮತ್ತೆಯ (ಎಐ) ತ್ವರಿತ ಅಳವಡಿಕೆ ಮತ್ತು ಕಾರ್ಪೊರೇಟ್ ಬೇಡಿಕೆ ನಿಧಾನವಾಗುತ್ತಿರುವುದು ವಜಾಗೊಳಿಸುವಿಕೆಗೆ ಕಾರಣ ಎಂದು ಕಂಪನಿ ಬಹಿರಂಗಪಡಿಸಿದೆ.

ಕಂಪನಿಯು 865 ಮಿಲಿಯನ್ ಡಾಲರ್‌ ಮೊತ್ತದ ಮರುರಚನೆ ಕಾರ್ಯಕ್ರಮದ ಭಾಗವಾಗಿ ಉದ್ಯೋಗ ಕಡಿತ ಮಾಡಲಾಗಿದೆ ಎಂದು ದೃಢಪಡಿಸಿದೆ. ಇದರ ಜೊತೆಗೆ, ಮುಂಬರುವ ತಿಂಗಳುಗಳಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಕಂಪನಿಯು ಕೆಲವು ಉದ್ಯೋಗಿಗಳನ್ನು ತ್ವರಿತವಾಗಿ ಕೆಲಸದಿಂದ ಬಿಡುಗಡೆಗೊಳಿಸಿದೆ. ಏಕೆಂದರೆ, ನಮಗೆ ಅವರನ್ನು ಮರುಕೌಶಲ್ಯಗೊಳಿಸುವ ಮೂಲಕ ಕಂಪನಿಗೆ ಬೇಕಾದ ಹೊಸ ಕೌಶಲ್ಯಗಳನ್ನು ಒದಗಿಸಲು ಸಾಧ್ಯವಿಲ್ಲ. ಕಂಪನಿಯು ಉದ್ಯೋಗಿಗಳನ್ನು ಕೃತಕ ಬುದ್ಧಿಮತ್ತೆ ಆಧಾರಿತ ಸೇವೆಗಳಿಗೆ ಕ್ಲೈಂಟ್‌ಗಳ ಬೇಡಿಕೆಗೆ ತಕ್ಕಂತೆ ಹೊಂದಿಕೊಳ್ಳುವ ಗುರಿಯನ್ನು ಹೊಂದಿದೆ. ಈ ಪ್ರಕ್ರಿಯೆಯಲ್ಲಿ, ಕೆಲವು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡಬೇಕಾಗಿದೆ. ಏಕೆಂದರೆ, ಅವರನ್ನು ಉಳಿಸಿಕೊಳ್ಳಲು ನಮಗೆ ಸಾಧ್ಯವಿಲ್ಲ ಎಂದು ಆಕ್ಸೆಂಚರ್‌ನ ಸಿಇಒ ಜೂಲಿ ಸ್ವೀಟ್ ಹೇಳಿದ್ದಾರೆ.

ಆಗಸ್ಟ್ ತಿಂಗಳ ಅಂತ್ಯದಲ್ಲಿ, ಆಕ್ಸೆಂಚರ್‌ನ ಜಾಗತಿಕ ಉದ್ಯೋಗಿಗಳ ಸಂಖ್ಯೆ 7,79,000 ಆಗಿತ್ತು, ಇದು ಮೂರು ತಿಂಗಳ ಹಿಂದೆ ಇದ್ದ 7,91,000 ರಿಂದ ಕಡಿಮೆಯಾಗಿದೆ. ಆಕ್ಸೆಂಚರ್‌ನಲ್ಲಿ ಉದ್ಯೋಗ ಕಡಿತದ ಈ ಸುತ್ತು ಈ ವರ್ಷದ ಆರಂಭದಲ್ಲಿ ಪ್ರಾರಂಭವಾಗಿದ್ದು, ಇದು 2025ರ ನವೆಂಬರ್‌ವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಕಂಪನಿಯ ಮರುರಚನೆಯು ಮುಖ್ಯವಾಗಿ ವಜಾಗೊಳಿಸುವಿಕೆಯ ವೆಚ್ಚಗಳನ್ನು ಒಳಗೊಂಡಿದ್ದು, ಇದರಿಂದ ಕಂಪನಿಗೆ 1 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.

ಉದ್ಯೋಗ ಕಡಿತದ ಜೊತೆಗೆ, ಆಕ್ಸೆಂಚರ್ ಕಂಪನಿಯು ತನ್ನ ಉದ್ಯೋಗಿಗಳಿಗೆ ಕೌಶಲ್ಯ ವೃದ್ಧಿಯ ತರಬೇತಿಯಲ್ಲಿ ಹೂಡಿಕೆ ಮಾಡುತ್ತಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಏಜೆಂಟಿಕ್ ಕೃತಕ ಬುದ್ಧಿಮತ್ತೆ (ಏಜೆಂಟಿಕ್ ಎಐ) ಕುರಿತು ತರಬೇತಿ ನೀಡಲು ಪ್ರಾರಂಭಿಸಿದೆ. ಇದು ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸಲು ವಿನ್ಯಾಸಗೊಳಿಸಲಾದ ಎಐ ಉಪಕರಣಗಳ ಹೊಸ ತರಂಗವಾಗಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ತರಬೇತಿಯು ಕ್ಲೈಂಟ್‌ಗಳ ನಿರೀಕ್ಷೆಗಳನ್ನು ಪೂರೈಸಲು ಮುಖ್ಯವಾಗಿದೆ ಎಂದು ಹೇಳಿದ್ದಾರೆ, ಏಕೆಂದರೆ ವಿಶ್ವದಾದ್ಯಂತದ ವ್ಯವಹಾರಗಳು ಎಐನೊಂದಿಗೆ ತಮ್ಮ ಕಾರ್ಯಾಚರಣೆಗಳನ್ನು ಮರುಆವಿಷ್ಕಾರ ಮಾಡಲು ಪ್ರಯತ್ನಿಸುತ್ತಿದೆ.

ಉದ್ಯೋಗ ಕಡಿತದ ಹೊರತಾಗಿಯೂ, ಆಕ್ಸೆಂಚರ್ ಕಂಪನಿಯು 2025ನೇ ಆರ್ಥಿಕ ವರ್ಷದ ಜೂನ್-ಆಗಸ್ಟ್ ತ್ರೈಮಾಸಿಕದಲ್ಲಿ ವಾರ್ಷಿಕವಾಗಿ 7% ಆದಾಯ ವೃದ್ಧಿಯನ್ನು ವರದಿ ಮಾಡಿದೆ. ಒಟ್ಟು 17.6 ಬಿಲಿಯನ್ ಡಾಲರ್ ಆದಾಯವನ್ನು ಗಳಿಸಿದ್ದು, ಇದು ನಿರೀಕ್ಷೆಗಳನ್ನು ಮೀರಿದೆ. ಸಿಇಒ ಜೂಲಿ ಸ್ವೀಟ್ ಅವರು, ಈ ಫಲಿತಾಂಶಗಳು ಆಕ್ಸೆಂಚರ್‌ ತನ್ನ “ಕ್ಲೈಂಟ್‌ಗಳಿಗೆ ಎಐನೊಂದಿಗೆ ಮರುಆವಿಷ್ಕಾರ ಮಾಡಲು ಮತ್ತು ಮುನ್ನಡೆಸಲು ಸಹಾಯ ಮಾಡುವ ವಿಶಿಷ್ಟ ಸಾಮರ್ಥ್ಯವನ್ನು” ಪ್ರದರ್ಶಿಸುತ್ತವೆ ಎಂದು ಹೇಳಿದ್ದಾರೆ.

ಆಮದು ಔಷಧಗಳಿಗೆ ಭಾರೀ ಹೊರೆ: ಶೇ.100ರಷ್ಟು ತೆರಿಗೆ ವಿಧಿಸಲು ಟ್ರಂಪ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....