Homeಮುಖಪುಟಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

ಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

- Advertisement -
- Advertisement -

ಪ್ರಶ್ನೆ ಕೇಳಲು ಹಣ ಪಡೆದ ಆರೋಪ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಗುರುವಾರ ಅಂಗೀಕಾರಿಸಿದೆ. ಈ ನೀತಿ ಸಮಿತಿಯ ವರದಿಯ ವಿರುದ್ಧ ವಿರೋಧ ಪಕ್ಷದ ಸಂಸದರು ಭಿನ್ನ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ. ಸಮಿತಿ ನಿರ್ಧಾರದಲ್ಲಿ ಯಾವುದೇ ನೀತಿ ಇಲ್ಲ. ಎಲ್ಲವೂ ಸೇಡಿನ ರಾಜಕೀಯವಾಗಿದೆ ಎಂದೂ ಅವರು ಹೇಳಿದ್ದಾರೆ.

”ತನಿಖಾ ಪ್ರಕ್ರಿಯೆಯು ಕೇವಲ ಒಂದು ಪ್ರಹಸನ. ಇದು ಕಾಂಗರೂ ನ್ಯಾಯಾಲಯ” ಎಂದು ವಿರೋಧ ಪಕ್ಷಗಳ ಸಂಸದರು ತಮ್ಮಭಿನ್ನಾಭಿಪ್ರಾಯ ಟಿಪ್ಪಣಿಗಳಲ್ಲಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸಂಸದರ ವಿರುದ್ಧ ದ್ವೇಷದಿಂದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ ದೂರಿಗೆ ಯಾವುದೇ ಕಿಮ್ಮತ್ತು ಇಲ್ಲ, ಅದು ಆಧಾರರಹಿತ. ಮಹಿಳಾ ಸಂಸದೆಯ ಮಾನಹಾನಿ ಮಾಡಲು ಇದನ್ನು ಬಳಸಲಾಗುತ್ತಿದೆ” ಎಂದು ಸಂಸದರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಪಿ.ಆರ್. ನಟರಾಜನ್ (ಸಿಪಿಐಎಂ), ಡ್ಯಾನಿಶ್ ಅಲಿ(ಬಿಎಸ್‌ಪಿ), ವಿ ವೈತಿಲಿಂಗಂ (ಕಾಂಗ್ರೆಸ್) ಮತ್ತು ಗಿರ್ಧಾರಿ ಯಾದವ್(ಜೆಡಿಯು) ತಮ್ಮ ಭಿನ್ನಾಭಿಪ್ರಾಯವನ್ನು ವೈಯಕ್ತಿಕವಾಗಿ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆಲಂಗಾಣದಲ್ಲಿ ಇದ್ದುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗದ ರೆಡ್ಡಿ ಅವರು ತಮ್ಮ ಅಸಮ್ಮತಿ ಪತ್ರವನ್ನು ಇಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಸಂಸದರ ಟಿಪ್ಪಣಿಗಳಲ್ಲಿ ತಮ್ಮ ಬಲವಾದ ಭಿನ್ನಾಭಿಪ್ರಾಯವನ್ನು ವರದಿ ಮಾತ್ರವಲ್ಲದೆ ಸಮಿತಿಯ ಸಂಪೂರ್ಣ ಕಾನೂನುಬಾಹಿರ ನಡವಳಿಕೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ತಿಳಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರಲ್ಲಿ ಒಬ್ಬರು, ಸಮಿತಿಯ ನಿರ್ಣಯಗಳು ಆತುರ ಮತ್ತು ಕಾನೂನು ಬಾಹಿರವಾಗಿದೆ ಎಂದಿದ್ದಾರೆ.

”ನೀತಿ ಸಮಿತಿಗೆ ನೀಡಿದ ದೂರು ಸುಳ್ಳು, ಕ್ಷುಲ್ಲಕ, ವಿಷಾದಕರವಾಗಿರಬಾರದು. ಇದು ಅಪಾಯಕಾರಿ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ. ಬೇರೆ ಎಲ್ಲ ರೀತಿಯ ಕಿರುಕುಳಕ್ಕೆ ಸಂಸದರನ್ನು ಉಚ್ಚಾಟಿಸಲು ಕೋರಲಾಗುತ್ತದೆ” ಎಂದು ಸಂಸದರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...