Homeಮುಖಪುಟಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

ಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

- Advertisement -
- Advertisement -

ಪ್ರಶ್ನೆ ಕೇಳಲು ಹಣ ಪಡೆದ ಆರೋಪ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಗುರುವಾರ ಅಂಗೀಕಾರಿಸಿದೆ. ಈ ನೀತಿ ಸಮಿತಿಯ ವರದಿಯ ವಿರುದ್ಧ ವಿರೋಧ ಪಕ್ಷದ ಸಂಸದರು ಭಿನ್ನ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ. ಸಮಿತಿ ನಿರ್ಧಾರದಲ್ಲಿ ಯಾವುದೇ ನೀತಿ ಇಲ್ಲ. ಎಲ್ಲವೂ ಸೇಡಿನ ರಾಜಕೀಯವಾಗಿದೆ ಎಂದೂ ಅವರು ಹೇಳಿದ್ದಾರೆ.

”ತನಿಖಾ ಪ್ರಕ್ರಿಯೆಯು ಕೇವಲ ಒಂದು ಪ್ರಹಸನ. ಇದು ಕಾಂಗರೂ ನ್ಯಾಯಾಲಯ” ಎಂದು ವಿರೋಧ ಪಕ್ಷಗಳ ಸಂಸದರು ತಮ್ಮಭಿನ್ನಾಭಿಪ್ರಾಯ ಟಿಪ್ಪಣಿಗಳಲ್ಲಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸಂಸದರ ವಿರುದ್ಧ ದ್ವೇಷದಿಂದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ ದೂರಿಗೆ ಯಾವುದೇ ಕಿಮ್ಮತ್ತು ಇಲ್ಲ, ಅದು ಆಧಾರರಹಿತ. ಮಹಿಳಾ ಸಂಸದೆಯ ಮಾನಹಾನಿ ಮಾಡಲು ಇದನ್ನು ಬಳಸಲಾಗುತ್ತಿದೆ” ಎಂದು ಸಂಸದರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಪಿ.ಆರ್. ನಟರಾಜನ್ (ಸಿಪಿಐಎಂ), ಡ್ಯಾನಿಶ್ ಅಲಿ(ಬಿಎಸ್‌ಪಿ), ವಿ ವೈತಿಲಿಂಗಂ (ಕಾಂಗ್ರೆಸ್) ಮತ್ತು ಗಿರ್ಧಾರಿ ಯಾದವ್(ಜೆಡಿಯು) ತಮ್ಮ ಭಿನ್ನಾಭಿಪ್ರಾಯವನ್ನು ವೈಯಕ್ತಿಕವಾಗಿ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆಲಂಗಾಣದಲ್ಲಿ ಇದ್ದುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗದ ರೆಡ್ಡಿ ಅವರು ತಮ್ಮ ಅಸಮ್ಮತಿ ಪತ್ರವನ್ನು ಇಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಸಂಸದರ ಟಿಪ್ಪಣಿಗಳಲ್ಲಿ ತಮ್ಮ ಬಲವಾದ ಭಿನ್ನಾಭಿಪ್ರಾಯವನ್ನು ವರದಿ ಮಾತ್ರವಲ್ಲದೆ ಸಮಿತಿಯ ಸಂಪೂರ್ಣ ಕಾನೂನುಬಾಹಿರ ನಡವಳಿಕೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ತಿಳಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರಲ್ಲಿ ಒಬ್ಬರು, ಸಮಿತಿಯ ನಿರ್ಣಯಗಳು ಆತುರ ಮತ್ತು ಕಾನೂನು ಬಾಹಿರವಾಗಿದೆ ಎಂದಿದ್ದಾರೆ.

”ನೀತಿ ಸಮಿತಿಗೆ ನೀಡಿದ ದೂರು ಸುಳ್ಳು, ಕ್ಷುಲ್ಲಕ, ವಿಷಾದಕರವಾಗಿರಬಾರದು. ಇದು ಅಪಾಯಕಾರಿ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ. ಬೇರೆ ಎಲ್ಲ ರೀತಿಯ ಕಿರುಕುಳಕ್ಕೆ ಸಂಸದರನ್ನು ಉಚ್ಚಾಟಿಸಲು ಕೋರಲಾಗುತ್ತದೆ” ಎಂದು ಸಂಸದರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...