Homeಮುಖಪುಟಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

ಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

- Advertisement -
- Advertisement -

ಪ್ರಶ್ನೆ ಕೇಳಲು ಹಣ ಪಡೆದ ಆರೋಪ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಗುರುವಾರ ಅಂಗೀಕಾರಿಸಿದೆ. ಈ ನೀತಿ ಸಮಿತಿಯ ವರದಿಯ ವಿರುದ್ಧ ವಿರೋಧ ಪಕ್ಷದ ಸಂಸದರು ಭಿನ್ನ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ. ಸಮಿತಿ ನಿರ್ಧಾರದಲ್ಲಿ ಯಾವುದೇ ನೀತಿ ಇಲ್ಲ. ಎಲ್ಲವೂ ಸೇಡಿನ ರಾಜಕೀಯವಾಗಿದೆ ಎಂದೂ ಅವರು ಹೇಳಿದ್ದಾರೆ.

”ತನಿಖಾ ಪ್ರಕ್ರಿಯೆಯು ಕೇವಲ ಒಂದು ಪ್ರಹಸನ. ಇದು ಕಾಂಗರೂ ನ್ಯಾಯಾಲಯ” ಎಂದು ವಿರೋಧ ಪಕ್ಷಗಳ ಸಂಸದರು ತಮ್ಮಭಿನ್ನಾಭಿಪ್ರಾಯ ಟಿಪ್ಪಣಿಗಳಲ್ಲಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸಂಸದರ ವಿರುದ್ಧ ದ್ವೇಷದಿಂದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ ದೂರಿಗೆ ಯಾವುದೇ ಕಿಮ್ಮತ್ತು ಇಲ್ಲ, ಅದು ಆಧಾರರಹಿತ. ಮಹಿಳಾ ಸಂಸದೆಯ ಮಾನಹಾನಿ ಮಾಡಲು ಇದನ್ನು ಬಳಸಲಾಗುತ್ತಿದೆ” ಎಂದು ಸಂಸದರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಪಿ.ಆರ್. ನಟರಾಜನ್ (ಸಿಪಿಐಎಂ), ಡ್ಯಾನಿಶ್ ಅಲಿ(ಬಿಎಸ್‌ಪಿ), ವಿ ವೈತಿಲಿಂಗಂ (ಕಾಂಗ್ರೆಸ್) ಮತ್ತು ಗಿರ್ಧಾರಿ ಯಾದವ್(ಜೆಡಿಯು) ತಮ್ಮ ಭಿನ್ನಾಭಿಪ್ರಾಯವನ್ನು ವೈಯಕ್ತಿಕವಾಗಿ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆಲಂಗಾಣದಲ್ಲಿ ಇದ್ದುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗದ ರೆಡ್ಡಿ ಅವರು ತಮ್ಮ ಅಸಮ್ಮತಿ ಪತ್ರವನ್ನು ಇಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಸಂಸದರ ಟಿಪ್ಪಣಿಗಳಲ್ಲಿ ತಮ್ಮ ಬಲವಾದ ಭಿನ್ನಾಭಿಪ್ರಾಯವನ್ನು ವರದಿ ಮಾತ್ರವಲ್ಲದೆ ಸಮಿತಿಯ ಸಂಪೂರ್ಣ ಕಾನೂನುಬಾಹಿರ ನಡವಳಿಕೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ತಿಳಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರಲ್ಲಿ ಒಬ್ಬರು, ಸಮಿತಿಯ ನಿರ್ಣಯಗಳು ಆತುರ ಮತ್ತು ಕಾನೂನು ಬಾಹಿರವಾಗಿದೆ ಎಂದಿದ್ದಾರೆ.

”ನೀತಿ ಸಮಿತಿಗೆ ನೀಡಿದ ದೂರು ಸುಳ್ಳು, ಕ್ಷುಲ್ಲಕ, ವಿಷಾದಕರವಾಗಿರಬಾರದು. ಇದು ಅಪಾಯಕಾರಿ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ. ಬೇರೆ ಎಲ್ಲ ರೀತಿಯ ಕಿರುಕುಳಕ್ಕೆ ಸಂಸದರನ್ನು ಉಚ್ಚಾಟಿಸಲು ಕೋರಲಾಗುತ್ತದೆ” ಎಂದು ಸಂಸದರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...