Homeಮುಖಪುಟಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

ಮಹುವಾ ಉಚ್ಚಾಟನೆ ಶಿಫಾರಸು ಅಂಗೀಕಾರ: ವಿಪಕ್ಷಗಳ ಸಂಸದರಿಂದ ಭಿನ್ನ ಅಭಿಪ್ರಾಯ ಸಲ್ಲಿಕೆ

- Advertisement -
- Advertisement -

ಪ್ರಶ್ನೆ ಕೇಳಲು ಹಣ ಪಡೆದ ಆರೋಪ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಗುರುವಾರ ಅಂಗೀಕಾರಿಸಿದೆ. ಈ ನೀತಿ ಸಮಿತಿಯ ವರದಿಯ ವಿರುದ್ಧ ವಿರೋಧ ಪಕ್ಷದ ಸಂಸದರು ಭಿನ್ನ ಅಭಿಪ್ರಾಯಗಳನ್ನು ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಸಭೆಯ ನೈತಿಕ ಸಮಿತಿ, ಮಹುವಾ ಲೋಕಸಭೆ ಸದಸ್ಯತ್ವ ರದ್ದು ಮಾಡುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ಸಭೆ ಸೇರಿ, ತನ್ನ ವರದಿಯನ್ನು ಅಂಗೀಕರಿಸಿ ಮಹುವಾರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಿದೆ ಎಂದು ವರದಿಗಳು ತಿಳಿಸಿವೆ.

ಮೊಯಿತ್ರಾ ನಡೆ ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ, ದೋಷಪೂರಿತ ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನೈತಿಕ ಸಮಿತಿಯ ಒಟ್ಟು 10 ಮಂದಿಯಲ್ಲಿ ಆರು ಸದಸ್ಯರು ವರದಿಯನ್ನು ಅಂಗೀಕರಿಸುವುದನ್ನು ಬೆಂಬಲಿಸಿದ್ದಾರೆ ಮತ್ತು ಉಳಿದ ನಾಲ್ವರು ಅದನ್ನು ವಿರೋಧಿಸಿದ್ದಾರೆ.

ಈ ಸಭೆಯ ನಂತರ ನಾಲ್ವರು ವಿರೋಧ ಪಕ್ಷದ ಸದಸ್ಯರು ಸಮಿತಿಯ ಶಿಫಾರಸು ‘ಪೂರ್ವಾಗ್ರಹ ಪೀಡಿತ’ ಮತ್ತು ‘ತಪ್ಪು’ ಎಂದು ಹೇಳಿದ್ದಾರೆ. ಸಮಿತಿ ನಿರ್ಧಾರದಲ್ಲಿ ಯಾವುದೇ ನೀತಿ ಇಲ್ಲ. ಎಲ್ಲವೂ ಸೇಡಿನ ರಾಜಕೀಯವಾಗಿದೆ ಎಂದೂ ಅವರು ಹೇಳಿದ್ದಾರೆ.

”ತನಿಖಾ ಪ್ರಕ್ರಿಯೆಯು ಕೇವಲ ಒಂದು ಪ್ರಹಸನ. ಇದು ಕಾಂಗರೂ ನ್ಯಾಯಾಲಯ” ಎಂದು ವಿರೋಧ ಪಕ್ಷಗಳ ಸಂಸದರು ತಮ್ಮಭಿನ್ನಾಭಿಪ್ರಾಯ ಟಿಪ್ಪಣಿಗಳಲ್ಲಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸಂಸದರ ವಿರುದ್ಧ ದ್ವೇಷದಿಂದ ಇಬ್ಬರು ವ್ಯಕ್ತಿಗಳು ಸಲ್ಲಿಸಿದ ದೂರಿಗೆ ಯಾವುದೇ ಕಿಮ್ಮತ್ತು ಇಲ್ಲ, ಅದು ಆಧಾರರಹಿತ. ಮಹಿಳಾ ಸಂಸದೆಯ ಮಾನಹಾನಿ ಮಾಡಲು ಇದನ್ನು ಬಳಸಲಾಗುತ್ತಿದೆ” ಎಂದು ಸಂಸದರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಪಿ.ಆರ್. ನಟರಾಜನ್ (ಸಿಪಿಐಎಂ), ಡ್ಯಾನಿಶ್ ಅಲಿ(ಬಿಎಸ್‌ಪಿ), ವಿ ವೈತಿಲಿಂಗಂ (ಕಾಂಗ್ರೆಸ್) ಮತ್ತು ಗಿರ್ಧಾರಿ ಯಾದವ್(ಜೆಡಿಯು) ತಮ್ಮ ಭಿನ್ನಾಭಿಪ್ರಾಯವನ್ನು ವೈಯಕ್ತಿಕವಾಗಿ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆಲಂಗಾಣದಲ್ಲಿ ಇದ್ದುದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗದ ರೆಡ್ಡಿ ಅವರು ತಮ್ಮ ಅಸಮ್ಮತಿ ಪತ್ರವನ್ನು ಇಮೇಲ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷದ ಸಂಸದರ ಟಿಪ್ಪಣಿಗಳಲ್ಲಿ ತಮ್ಮ ಬಲವಾದ ಭಿನ್ನಾಭಿಪ್ರಾಯವನ್ನು ವರದಿ ಮಾತ್ರವಲ್ಲದೆ ಸಮಿತಿಯ ಸಂಪೂರ್ಣ ಕಾನೂನುಬಾಹಿರ ನಡವಳಿಕೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ತಿಳಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರಲ್ಲಿ ಒಬ್ಬರು, ಸಮಿತಿಯ ನಿರ್ಣಯಗಳು ಆತುರ ಮತ್ತು ಕಾನೂನು ಬಾಹಿರವಾಗಿದೆ ಎಂದಿದ್ದಾರೆ.

”ನೀತಿ ಸಮಿತಿಗೆ ನೀಡಿದ ದೂರು ಸುಳ್ಳು, ಕ್ಷುಲ್ಲಕ, ವಿಷಾದಕರವಾಗಿರಬಾರದು. ಇದು ಅಪಾಯಕಾರಿ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ. ಬೇರೆ ಎಲ್ಲ ರೀತಿಯ ಕಿರುಕುಳಕ್ಕೆ ಸಂಸದರನ್ನು ಉಚ್ಚಾಟಿಸಲು ಕೋರಲಾಗುತ್ತದೆ” ಎಂದು ಸಂಸದರ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೈತಿಕ ಸಮಿತಿಯ ಕರಡು ಗೌಪ್ಯ ವರದಿ NDTVಯಿಂದ ಸೋರಿಕೆ: ಸ್ಪೀಕರ್‌ಗೆ ಮೊಯಿತ್ರಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...