Homeಕರೋನಾ ತಲ್ಲಣ2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

2 ಡೋಸ್‌ ಪಡೆದವರಿಗಷ್ಟೇ ಮಾಲ್, ಥಿಯೇಟರ್‌‌ಗೆ ಪ್ರವೇಶ: ರಾಜ್ಯ ಸರ್ಕಾರ ನಿರ್ಧಾರ

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

- Advertisement -
- Advertisement -

ಕರ್ನಾಟಕದಲ್ಲಿ ಒಮೈಕ್ರಾನ್ ಪ್ರಕರಣಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ. ಜೊತೆಗೆ ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ 2 ಡೋಸ್ ಲಸಿಕೆ ಪಡೆದುಕೊಂಡ ನಾಗರಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಶುಕ್ರವಾರ ಹೇಳಿದೆ.

ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾದ ನಂತರ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಒಮೈಕ್ರಾನ್‌ಗೆ ಬೂಸ್ಟರ್ ಡೋಸ್ ಶಿಫಾರಸು; ಕರ್ನಾಟಕದಲ್ಲಿ ದ.ಆಫ್ರಿಕಾದ 10 ಜನರು ನಾಪತ್ತೆ

“ಮುಂದಿನ ಆದೇಶದವರೆಗೆ ಕೇವಲ 500 ಜನರಿಗೆ ಮಾತ್ರ ಮದುವೆ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದು. ಥಿಯೇಟರ್, ಮಲ್ಟಿಪ್ಲೆಕ್ಸ್, ಶಾಪಿಂಗ್ ಮಾಲ್‌ಗಳಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಮಾತ್ರ ಪ್ರವೇಶ ನೀಡಲಾಗುವುದು” ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಹೊಸ ವರ್ಷಾಚರಣೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ ಆರ್‌. ಅಶೋಕ್‌, ಮುಂದಿನ ಬೆಳವಣಿಗೆಗಳನ್ನು ಅವಲೋಕಿಸಿದ ನಂತರ ಸರ್ಕಾರ ಸೂಕ್ತ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ಕ್ಲಸ್ಟರ್‌ಗಳು ಬೆಳಕಿಗೆ ಬರುತ್ತಿರುವುದರಿಂದ, ಶಿಕ್ಷಣ ಸಂಸ್ಥೆಗಳಲ್ಲಿನ ಎಲ್ಲಾ ಕಾರ್ಯಕ್ರಮಗಳು ಸರ್ಕಾರ ನಿಷೇಧಿಸಿದೆ. ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಜನವರಿ 15, 2022 ರವರೆಗೆ ಮುಂದೂಡಲು ಶಾಲೆಗಳು ಮತ್ತು ಕಾಲೇಜುಗಳಿಗೆ ಆದೇಶ.

ವಿದ್ಯಾರ್ಥಿಗಳ ಪೋಷಕರು ಸಂಪೂರ್ಣವಾಗಿ ಲಸಿಕೆ ಪಡೆಯದ ಹೊರತು ಶಾಲೆಗಳಲ್ಲಿ ಆಫ್‌ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿಯಿಲ್ಲ.

ಇದನ್ನೂ ಓದಿ:ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ವಿಮಾನ ನಿಲ್ದಾಣಗಳ ಮೂಲಕ ರಾಜ್ಯ ಪ್ರವೇಶಿಸುವ ಪ್ರಯಾಣಿಕರ ಕಡ್ಡಾಯ ಪರೀಕ್ಷೆ. ಅವರ ಪರೀಕ್ಷಾ ವರದಿ ಬಂದ ನಂತರವೇ ಪ್ರಯಾಣಿಕರು ಅಲ್ಲಿಂದ ಹೊರಬರುವುದಕ್ಕೆ ಅವಕಾಶ.

ಈ ನಡುವೆ ಓಮೈಕ್ರಾನ್‌‌ ಪಾಸಿಟಿವ್‌ ಆಗಿದ್ದ 66 ವರ್ಷದ ವಿದೇಶಿ ಪ್ರಜೆಯೊಬ್ಬರು ತಪ್ಪಿಸಿಕೊಂಡಿದ್ದಾರೆ ಪೊಲೀಸರಿಗೆ ದೂರು ನೀಡಲಾಗಿದೆ.

“ವ್ಯಕ್ತಿ ತಂಗಿದ್ದ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆದ ತಪ್ಪುಗಳ ಬಗ್ಗೆ ಎಂದು ಪೊಲೀಸರು ತನಿಖೆ ನಡೆಸುತ್ತಾರೆ” ಎಂದು ಅಶೋಕ್ ಹೇಳಿದರು.

ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಕೊರೊನಾ ಹಾಸಿಗೆಗಳನ್ನು ಮತ್ತೊಮ್ಮೆ ತೆರೆಯಲಾಗುತ್ತದೆ. ಆಕ್ಸಿಜನ್ ಪ್ಲಾಂಟ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸರಿಪಡಿಸಿ ಸಿದ್ಧವಾಗಿ ಇಡಲಾಗುವುದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

“ಆಮ್ಲಜನಕದ ಲಭ್ಯತೆಯನ್ನು ಈ ಹಿಂದೆ ರಚಿಸಲಾದ ಸಮಿತಿಗಳು ಮೇಲ್ವಿಚಾರಣೆ ಮಾಡುತ್ತವೆ. ಕೋವಿಡ್ ನಿಯಂತ್ರಣ ಕೊಠಡಿಗಳನ್ನು ರಾಜ್ಯಾದ್ಯಂತ ಮತ್ತೆ ಪುನರಾರಂಭಿಸಲಾಗುವುದು. ಕೋವಿಡ್ ಔಷಧಿಗಳ ಕೊರತೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ಲಸಿಕೆಗಳು ಮತ್ತು ಔಷಧಿಗಳನ್ನು ಮುಂಚಿತವಾಗಿ ಖರೀದಿಸಲಾಗುವುದು” ಎಂದು ಆರ್‌. ಅಶೋಕ್‌ ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...