Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...