Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...