Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...